2-1 ಅಂತರದಿಂದ ಸರಣಿಯನ್ನು ಗೆದ್ದಿರುವ ಭಾರತಕ್ಕೆ ನಿರ್ಣಾಯಕವಾದ ಎರಡೂ ಪಂದ್ಯಗಳಲ್ಲಿ ನೆರವಾದ ಎಂಎಸ್ ಧೋನಿಗೆ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ನೀಡಲಾಗಿದೆ. ಮೊದಲ ಪಂದ್ಯದಲ್ಲಿ ಧೋನಿಯ ನಿಧಾನಗತಿಯ ಬ್ಯಾಟಿಂಗ್ ನಿಂದಲೇ ಪಂದ್ಯ ಸೋತಿದ್ದೆಂಬ ನಿಂದನೆ ಕೇಳಿಬಂದಿತ್ತು. ಆದರೆ ಉಳಿದ ಎರಡೂ ಪಂದ್ಯಗಳಲ್ಲಿ ಧೋನಿ ತಮ್ಮ ಟೀಕಾಕಾರರಿಗೆ ಬ್ಯಾಟ್ ನಿಂದಲೇ ಉತ್ತರ ನೀಡಿದ್ದು, ಈಗಲೂ ನಂಬಿಕಸ್ಥ ಬ್ಯಾಟ್ಸ್ ಮನ್ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.