ಮಾಯಾಂಕ್ ಇಲ್ಲಿಯವರೆಗೂ ಒಂದೇ ಒಂದು ಅಂತಾರಾಷ್ಟ್ರೀಯ ಏಕದಿನ ಪಂದ್ಯವನ್ನಾಡಿಲ್ಲ ಆದರೂ ಅಗರವಾಲ್ ಆಯ್ಕೆಗೆ ಕಾರಣವೇನು ಎಂಬ ಮಾತು ಕೇಳಿಬಂದಿತ್ತು. ತಂಡಕ್ಕೆ ಯಾರನ್ನಾದರೂ ಆಯ್ಕೆ ಮಾಡಬೇಕು ಎಂದರೆ ಬಿಸಿಸಿಐ ಆಯ್ಕೆ ಸಮಿತಿ ನಿರ್ಧಾರ ಮಾಡಬೇಕು. ಆದರೆ ಮಾಯಾಂಕ್ ರನ್ನು ಆಯ್ಕೆ ಸಮಿತಿ ಬದಲಿಗೆ ಟೀಂ ಮ್ಯಾನೇಜ್ ಮೆಂಟ್ ಆಯ್ಕೆ ಮಾಡಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ.