ಇದೇ ವೇಳೆ ರವೀಂದ್ರ ಜಡೇಜಾ ಬ್ಯಾಟಿಂಗ್ ಕುರಿತು ಮಾತನಾಡಿದ ಕೊಹ್ಲಿ, 'ಜಡೇಜಾ ಕಳೆದ ಎರಡು ಪಂದ್ಯದಲ್ಲೂ ಉತ್ತಮ ಪ್ರದರ್ಶನ ತೋರಿದ್ದಾರೆ. ಧೋನಿ ಮತ್ತು ಅವರ ಪಾರ್ಟನರ್ಶಿಪ್ ಚೆನ್ನಾಗಿತ್ತು. ಆದರೆ ಟಾಪ್ ಆರ್ಡರ್ ಬ್ಯಾಟ್ಸ್ ಮನ್ ಗಳ ವೈಫಲ್ಯವೇ ತಂಡದ ಸೋಲಿಗೆ ಪ್ರಮುಖ ಕಾರಣವಾಯಿತು ಎಂದು ಹೇಳಿದರು. ಇದೇ ವೇಳೆ ಮಹೇಂದ್ರ ಸಿಂಗ್ ಧೋನಿಯ ಕ್ರಿಕೆಟ್ ನಿವೃತ್ತಿ ಬಗ್ಗೆ ಪ್ರತಿಕ್ರಿಯಿಸಿದ ಕೊಹ್ಲಿ, ಧೋನಿ ತಮ್ಮ ನಿವೃತ್ತಿಯ ಬಗ್ಗೆ ನಮ್ಮ ಬಳಿಯಾಗಲಿ, ತಂಡದ ಆಟಗಾರರ ಬಳಿಯಾಗಲಿ ಚರ್ಚೆಸಿಲ್ಲ. ವಿಶ್ವಕಪ್ ಬಳಿಕ ಅವರ ಮುಂದಿನ ಆಯ್ಕೆ ಏನು ಎಂಬುದು ನಮಗೆ ತಿಳಿದಿಲ್ಲ ಎಂದಿದ್ದಾರೆ.