ಇನ್ನು ಕರ್ನಾಟಕದ ಮನೀಷ್ ಪಾಂಡೇ, ಶ್ರೇಯಸ್ ಅಯ್ಯರ್ ಕೂಡ ಕಳೆದ ಐಪಿಎಲ್ ಟೂರ್ನಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದರು. ಚುಟುಕು ಕ್ರಿಕೆಟ್ ನಲ್ಲಿ ಮಧ್ಯಮ ಕ್ರಮಾಂಕಕ್ಕೆ ಇವರು ಫಿಟ್ ಎಂಬ ಭಾವನೆ ಮೂಡಿಸಿದ್ದಾರೆ. ಇವರಷ್ಟೇ ಅಲ್ಲದೇ ಮಯಾಂಕ್ ಅಗರ್ವಾಲ್, ಯುವ ವೇಗಿಗಳಾದ ನವದೀಪ್ ಸೈನಿ, ಖಲೀಲ್ ಅಹ್ಮದ್ ಮತ್ತು ದೀಪಕ್ ಚಹರ್, ಲೆಗ್ ಸ್ಪಿನ್ನರ್ಗಳಾದ ರಾಹುಲ್ ಚಹರ್ ಮತ್ತು ಮಾಯಾಂಕ್ ಮಾರ್ಕಂಡೆ, ಆಲ್ರೌಂಡರ್ ಕ್ರುಣಾಲ್ ಪಾಂಡ್ಯ, ಮತ್ತು ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಸಂಜು ಸ್ಯಾಮ್ಸನ್ ಆಯ್ಕೆದಾರರ ಗಮನ ಸೆಳೆದಿದ್ದಾರೆ.