ವಿಶ್ವಕಪ್ ಟೂರ್ನಿಗೂ ಮುಂಚಿತವಾಗಿ ನಾಲ್ಕನೇ ಕ್ರಮಾಂಕದ ಬ್ಯಾಟಿಂಗ್ ಗಾಗಿ ಹಲವು ಮಾರ್ಗಗಳಿದ್ದವು. ಆ ಕ್ರಮಾಂಕದಲ್ಲಿ ಅಂಬಟಿ ರಾಯುಡು ಸ್ಥಿರ ಪ್ರದರ್ಶನ ನೀಡುತ್ತಿದ್ದರು. ಆದರೆ, ಅವರ ಬದಲಿಗೆ ವಿಜಯ್ ಶಂಕರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಆದರೆ, ಶಂಕರ್ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗುವುದರ ಜೊತೆಗೆ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರಗುಳಿದರು.