ಇದು ಕ್ರಿಕೆಟ್ ಪ್ರೇಮಿಗಳ ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ಉಭಯ ತಂಡಗಳು ಸಮಬಲದ ಹೋರಾಟ ನೀಡಿದ್ದು, ಅಂಪೈರ್ ಗಳ ಎಡವಟ್ಟಿನಿಂದಾಗಿ ಕಿವೀಸ್ ಪಡೆಗೆ ಚಾಂಪಿಯನ್ ಪಟ್ಟ ಕೈ ತಪ್ಪಿತು. ಹೀಗಾಗಿ ಉಭಯ ತಂಡಗಳನ್ನೂ ಜಂಟಿ ಚಾಂಪಿಯನ್ ಎಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿದ್ದರು. ಈ ಚರ್ಚೆ ಚಾಲ್ತಿಯಲ್ಲಿರುವಂತೆಯೇ ಈ ಚರ್ಚೆಗೆ ಭಾರತದ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಪ್ರವೇಶ ಮಾಡಿದ್ದು, ವಿಶ್ವಕಪ್ ಫೈನಲ್ ಪಂದ್ಯ ಟೈ ಎಂದು ಟ್ವೀಟ್ ಮಾಡಿದ್ದಾರೆ.