ಈ ವಿಚಾರವನ್ನು ಸ್ವತಃ ಬಿಸಿಸಿಐ ಅಧಿಕಾರಿಗಳೇ ಬಹಿರಂಗ ಪಡಿಸಿದ್ದಾರೆ. ಆ ಮೂಲಕ ಧೋನಿ ತಮ್ಮ ಅಲಭ್ಯತೆ ಸ್ಪಷ್ಟವಾಗಿದ್ದು, ಆಯ್ಕೆ ಸಮಿತಿ ಗೊಂದಲ ಕೂಡ ನಿವಾರಣೆಯಾಗಿದೆ. ಇನ್ನು ನಾಳೆ ಮುಂಬೈನಲ್ಲಿ ಟೀಂ ಇಂಡಿಯಾ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ವಿಂಡೀಸ್ ಪ್ರವಾಸಕ್ಕೆ ತಂಡದ ಆಟಗಾರರ ಆಯ್ಕೆ ನಡೆಯಲಿದೆ. ಧೋನಿ ಬದಲಿಗೆ ರಿಷಬ್ ಪಂತ್ ಅಥವಾ ವೃದ್ದಿಮಾನ್ ಸಹಾ ಆಯ್ಕೆಯಾಗುವ ಸಾಧ್ಯತೆಗಳಿವೆ.