ಇದೇ ವೇಳೆ ಹಾಲಿ ವಿಂಡೀಸ್ ಪ್ರವಾಸಕ್ಕೆ ತಂಡದ ಹಿರಿಯ ಆಟಗಾರ ಎಂಎಸ್ ಧೋನಿ ತೆರಳುತ್ತಿಲ್ಲ. ಅವರಾಗಿಯೇ ತಂಡದಿಂದ ದೂರ ಉಳಿಯಲು ನಿರ್ಧರಿಸಿದ್ದು, ಈ ಕುರಿತಂತೆ ಅವರು ಬಿಸಿಸಿಐಗೆ ಮಾಹಿತಿ ನೀಡಿದ್ದಾರೆ. ನಾವು ಮುಂಬರುವ ವಿಶ್ವಕಪ್ ಗೂ ಈಗಿನಿಂದಲೇ ಸಿದ್ಧರಾಗಬೇಕಿದ್ದು, ಆ ಕುರಿತಂತೆ ಯೋಜನೆ ಮತ್ತು ಸರಣಿ ಆಯೋಜನೆಯ ಪಟ್ಟಿ ಮಾಡಲಾಗುತ್ತಿದೆ ಎಂದು ಪ್ರಸಾದ್ ಹೇಳಿದರು.