ಐಸಿಸಿ ವಿಶ್ವಕಪ್ ನಲ್ಲಿ ಭಾರತ ತಂಡದ ಸೆಮಿಫೈನಲ್ಸ್ ನಲ್ಲಿ ಸೋತ ಬಳಿಕ ಯುವ ಆಟಗಾರರಿಗೆ ಮಣೆ ಹಾಕುವ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ವಿಂಡೀಸ್ ವಿರುದ್ಧದ ಸರಣಿಗೆ ಮನೀಷ್ ಪಾಂಡೆ ಹಾಗೂ ಶ್ರೇಯಸ್ ಅಯ್ಯರ್ ಅವರಿಗೆ ಸ್ಥಾನ ನೀಡಲಾಗಿದ್ದು, ಈ ಸ್ಟಾರ್ ಆಟಗಾರರು ವಿಂಡೀಸ್ ವಿರುದ್ಧ ಭಾರತ ‘ಎ’ ತಂಡದ ಪರ ಭರ್ಜರಿ ಪ್ರದರ್ಶನ ನೀಡಿದ್ದಾರೆ.