ಇನ್ನು ಧವನ್ ಗಾಯಗೊಂಡಿರುವುದರಿಂದ ಭಾರತದ ಮುಂದಿನ ಪಂದ್ಯಗಳಲ್ಲಿ ಕೆಎಲ್ ರಾಹುಲ್, ರೋಹಿತ್ ಶರ್ಮಾರೊಂದಿಗೆ ಇನ್ನಿಂಗ್ಸ್ ಆರಂಭಿಸಲಿದ್ದು, ನಾಲ್ಕನೇ ಕ್ರಮಾಂಕಕ್ಕೆ ಈ ವರೆಗೂ ಆಯ್ಕೆ ಪಕ್ಕಾ ಆಗಿಲ್ಲ. ಆದರೆ ಪಂದ್ಯಕ್ಕೆ ಕ್ಷಣಗಣನೆ ಇರುವಂತೆ ಆಟಗಾರರ ಮತ್ತು ಪಿಚ್ ಮರ್ಮ ಅರಿತು ನಾಲ್ಕನೇ ಕ್ರಮಾಂಕವನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ನಾಲ್ಕನೇ ಕ್ರಮಾಂಕಕ್ಕಾಗಿ ಶ್ರೇಯಶ್ ಅಯ್ಯರ್ ಮತ್ತು ದಿನೇಶ್ ಕಾರ್ತಿಕ್ ರನ್ನು ಸನ್ನದ್ದ ಸ್ಥಿತಿಯಲ್ಲಿರಿಸಲಾಗುತ್ತದೆ ಎಂದು ತಂಡದ ಮೂಲಗಳು ತಿಳಿಸಿವೆ.