ಹೌದು.. ಕಳೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕಾಲ್ಟರ್ ನೈಲ್ ಎಸೆದ ಚೆಂಡು ಧವನ್ ಎಡಗೈ ಹೆಬ್ಬೆರಳಿಗೆ ತಗುಲಿ ಮೂಳೆಗೆ ಏಟಾಗಿತ್ತು. ಆ ಬಳಿಕ ನಡೆದ ವೈದ್ಯಕೀಯ ಪರೀಕ್ಷೆ ಬಳಿಕ ಧವನ್ ವಿಶ್ವಕಪ್ ನ ಉಳಿದ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಮಾರನೆಯೇ ದಿನವೇ ಬಿಸಿಸಿಐ ಗಾಯಗೊಂಡರೂ ಧವನ್ ತಂಡ ತೊರೆಯುವಂತಿಲ್ಲ ಎಂದು ಹೇಳಿ ಅಚ್ಚರಿಗೆ ಕಾರಣವಾಗಿತ್ತು. ಇದೀಗ ಇದೇ ರೀತಿಯ ಅಚ್ಚರಿ ಹೇಳಿಕೆ ತಂಡದ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಕೂಡ ನೀಡಿದ್ದು, ಧವನ್ ರಂತಹ ಅತಿಮುಖ್ಯ ಆಟಗಾರನನ್ನು ಕಳೆದುಕೊಳ್ಳಲು ಇಚ್ಛಿಸುವುದಿಲ್ಲ ಎಂದು ಹೇಳುವ ಮೂಲಕ ಧವನ್ ಟೀಂ ಇಂಡಿಯಾದ ಮುಂದಿನ ಪಂದ್ಯಗಳಿಗೆ ಲಭ್ಯರಾಗುತ್ತಾರೆ ಎಂಬ ಚರ್ಚೆ ಹುಟ್ಟು ಹಾಕಿದ್ದಾರೆ.