ಹಾಲಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಪಾಕಿಸ್ತಾನಿ ಮಾಧ್ಯಮಗಳು ಬಿಡುಗಡೆ ಮಾಡಿದ್ದ ಕಪ್ ಜಾಹಿರಾತು ವ್ಯಾಪಕ ವೈರಲ್ ಆಗಿ, ಭಾರತೀಯರ ಆಕ್ರೋಶಕ್ಕೆ ಕಾರಣವಾಗಿತ್ತು. ಬಾಲಾಕೋಟ್ ದಾಳಿಯ ಬಳಿಕ ಪಾಕಿಸ್ತಾನಿ ಯುದ್ಧ ವಿಮಾನಗಳನ್ನು ಅಟ್ಟಾಡಿಸಿಕೊಂಡು ಹೋಗಿ ಎಫ್ 16 ಯುದ್ದ ವಿಮಾನವನ್ನು ಹೊಡೆದುರುಳಿಸಿದ್ದ ಭಾರತದ ಹೆಮ್ಮೆಯ ಯೋಧ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ರ ಘಟನೆ ಕುರಿತ ವಿವಾದಿತ ಜಾಹಿರಾತೊಂದನ್ನು ಪಾಕಿಸ್ತಾನಿ ಮೀಡಿಯಾಗಳು ಪ್ರಸಾರ ಮಾಡಿದ್ದವು. ಈ ಜಾಹಿರಾತಿಗೆ ಭಾರತದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.