ಲಂಡನ್: ವಿಶ್ವಕಪ್ ಟೂರ್ನಿಯ ನ್ಯೂಜಿಲ್ಯಾಂಡ್ ಮತ್ತು ಟೀಂ ಇಂಡಿಯಾ ವಿರುದ್ಧದ ಪಂದ್ಯ ಮಳೆಯಿಂದ ರದ್ದಾಗಿರುವುದಕ್ಕೆ ಕ್ರಿಕೆಟ್ ಅಭಿಮಾನಿಗಳು ತೀವ್ರ ಬೇಸರ ಮಾಡಿಕೊಂಡಿದ್ದರು. ಇದೀಗ ನಾಳೆ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಪಂದ್ಯ ನಡೆಯಲಿದ್ದು ಈ ಪಂದ್ಯಕ್ಕೂ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ.
ಇನ್ನು ಟೀಂ ಇಂಡಿಯಾದ ಆಟಗಾರ ಕೇದಾರ್ ಜಾಧವ್ ಇಂಗ್ಲೆಂಡ್ ನೆಲದಲ್ಲಿ ನಿಂತು ಮೋಡಗಳತ್ತ ಕೈ ತೋರಿಸಿ ಹೋಗು ಹೋಗು ಮಳೆ ಮಹಾರಾಷ್ಟ್ರಕ್ಕೆ ಎಂದು ಹೇಳಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮೂರು ಪಂದ್ಯಗಳನ್ನು ಆಡಿದ್ದು ಎರಡರಲ್ಲಿ ಜಯಗಳಿಸಿದೆ. ಇನ್ನು ಮೂರನೇ ಪಂದ್ಯ ಮಳೆಯಿಂದ ರದ್ದಾಗಿದ್ದು ನಾಳೆ ಪಾಕಿಸ್ತಾನ ವಿರುದ್ಧದ ಪಂದ್ಯ ಹೆಚ್ಚು ಮಹತ್ವದ್ದಾಗಿದೆ.
Haha Kedar Jadhav asking rains from England to shift to Maharashtra