ಕೊನೆಗೂ ಈಡೇರಿತು ಗಂಗೂಲಿ ಆಸೆ: ಟೀಂ ಇಂಡಿಯಾ ಸೇರಿಕೊಂಡ ರಿಷಬ್!

ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಶತಕ ಬಾರಿಸಿದ್ದ ಶಿಖರ್ ಧವನ್ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದು ಅವರ ಜಾಗಕ್ಕೆ ಟೀಂ ಇಂಡಿಯಾದ ಉದಯೋನ್ಮುಕ ಆಟಗಾರ ರಿಷಬ್ ಪಂತ್...
ರಿಷಬ್ ಪಂತ್
ರಿಷಬ್ ಪಂತ್
ಲಂಡನ್: ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಶತಕ ಬಾರಿಸಿದ್ದ ಶಿಖರ್ ಧವನ್ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದು ಅವರ ಜಾಗಕ್ಕೆ ಟೀಂ ಇಂಡಿಯಾದ ಉದಯೋನ್ಮುಕ ಆಟಗಾರ ರಿಷಬ್ ಪಂತ್ ಆಯ್ಕೆಯಾಗಿದ್ದರು. ಸದ್ಯ ಲಂಡನ್ ನಲ್ಲಿ ಟೀಂ ಇಂಡಿಯಾವನ್ನು ಪಂತ್ ಸೇರಿಕೊಂಡಿದ್ದಾರೆ.
ಇನ್ನು ಟೀಂ ಇಂಡಿಯಾವನ್ನು ಸೇರಿಕೊಂಡಿರುವ ರಿಷಬ್ ಪಂತ್ ಪಾಕಿಸ್ತಾನ ವಿರುದ್ಧದ ನಾಳಿನ ಪಂದ್ಯದಲ್ಲಿ ಆಡುವ 11ರ ಬಳಗದಲ್ಲಿ ಕಾಣಿಸಿಕೊಳ್ಳುತ್ತಾರಾ ಕಾದು ನೋಡಬೇಕು.
ಟೀಂ ಇಂಡಿಯಾದ ಉದಯೋನ್ಮುಕ ಎಡಗೈ ಸ್ಫೋಟಕ ಬ್ಯಾಟ್ಸ್ ಮನ್ ರಿಷಬ್ ಪಂತ್ ರನ್ನು ವಿಶ್ವಕಪ್ ಗೆ ಆಯ್ಕೆ ಮಾಡಿಲ್ಲ ಎಂದು ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದರು.
ಸದ್ಯ ಟೀಂ ಇಂಡಿಯಾದ ಆಟಗಾರರು ಮ್ಯಾಂಚೆಸ್ಟರ್ ನಲ್ಲಿ ಅಭ್ಯಾಸದಲ್ಲಿ ತೊಡಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com