ವಿಶ್ವ ಕಪ್ 2019: ಪಾಕ್ ವಿರುದ್ಧ ಭಾರತ ಗೆಲುವಿಗಾಗಿ ದೇಶಾದ್ಯಂತ ವಿಶೇಷ ಪೂಜೆ , ಪುನಸ್ಕಾರ

ಸಾಂಪ್ರಾದಾಯಿಕ ಬದ್ಧ ವೈರಿಗಳಾದ ಭಾರತ- ಪಾಕಿಸ್ತಾನ ನಡುವಣ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಕೊಹ್ಲಿ ಪಡೆ ಗೆದ್ದು ಬರಲಿ ಎಂದು ಪ್ರಾರ್ಥಿಸಿ ದೇಶಾದ್ಯಂತ ವಿವಿಧ ದೇವಾಲಯಗಳಲ್ಲಿ ಪೂಜೆ, ಪುನಸ್ಕಾರ, ಹೋಮ, ಹವನಗಳು ನಡೆಯುತ್ತಿವೆ.
ವಿಶೇಷ ಪೂಜೆ, ಹೋಮ
ವಿಶೇಷ ಪೂಜೆ, ಹೋಮ
ವಾರಾಣಸಿ: ಸಾಂಪ್ರಾದಾಯಿಕ ಬದ್ಧ ವೈರಿಗಳಾದ ಭಾರತ- ಪಾಕಿಸ್ತಾನ ನಡುವಣ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಕೊಹ್ಲಿ ಪಡೆ ಗೆದ್ದು ಬರಲಿ ಎಂದು ಪ್ರಾರ್ಥಿಸಿ ದೇಶಾದ್ಯಂತ ವಿವಿಧ ದೇವಾಲಯಗಳಲ್ಲಿ ಪೂಜೆ, ಪುನಸ್ಕಾರ, ಹೋಮ, ಹವನಗಳು ನಡೆಯುತ್ತಿವೆ.
ಬ್ಯಾಟ್, ರಾಷ್ಟ್ರಧ್ವಜ, ಹಾಗೂ ತಮ್ಮ ಫೇವರಿಟ್ ಆಟಗಾರರ ಪೋಟೋಗಳನ್ನು ಹಿಡಿದುಕೊಂಡು ದೇವಾಲಯಗಳಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ಕ್ರಿಕೆಟ್ ಪ್ರೇಮಿಗಳು, ಇಂದಿನ ಮಹಾ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಲಿ ಎಂದು ಪ್ರಾರ್ಥಿಸುತ್ತಿದ್ದಾರೆ.
ಪಂದ್ಯ ನಡೆಯಲಿರುವ ಮ್ಯಾಂಚೆಸ್ಟರ್ ನಲ್ಲಿ ಮಳೆ ಬಾರದಿರಲಿ ಎಂದು ಪ್ರಾರ್ಥಿಸಿ ಪ್ರಯಾಗ್ ರಾಜ್ ನಲ್ಲಿ ಇಂದ್ರಾ ದೇವತೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು.  ಮೊರಾದಾಬಾದ್ ಹಾಗೂ ಕಾನ್ಪುರದಲ್ಲಿ ಕ್ರಿಕೆಟ್ ಅಭಿಮಾನಿಗಳು ವಿರಾಟ್ ಕೊಹ್ಲಿ ಹಾಗೂ ಧೋನಿ ಪೋಸ್ಟರ್ ಹಿಡಿದು ಭಾರತ ಗೆಲ್ಲಲಿ ಎಂದು ವಿಶೇಷ ಹವನ ಮಾಡಿದರು.
ಭಾರತ ಖಂಡಿತವಾಗಿ ಗೆಲ್ಲಲಿದೆ ಎಂದು ಭೂಪಾಲ್ ನಲ್ಲಿನ ಯುವ ಕ್ರಿಕೆಟ್ ಪ್ರೇಮಿಗಳು ವಿಶ್ವಾಸ ವ್ಯಕ್ತಪಡಿಸಿದರು. ಶಿಖರ್ ಧವನ್ ಗಾಯಗೊಂಡು ಟೂರ್ನಿಯಿಂದ ಹೊರಗುಳಿದಿದ್ದರೂ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಉತ್ತಮ ಆರಂಭ ನೀಡಲಿದ್ದಾರೆ ಎಂದು ಮತ್ತೊಬ್ಬರು ಹೇಳಿದರು. 
ವಿರಾಟ್ ಕೊಹ್ಲಿ ಹಾಗೂ ಜಸ್ಪ್ರೀತ್ ಬೂಮ್ರಾ ತಮ್ಮ ಫೇವರಿಟ್ ಆಟಗಾರರಾಗಿದ್ದು, ಟೀಂ ಇಂಡಿಯಾ ಗೆಲ್ಲಲಿದೆ ಎಂದು ಲಖನೌದಲ್ಲಿ ಕ್ರಿಕೆಟ್ ಅಭಿಮಾನಿಗಳು ಭರವಸೆ ವ್ಯಕ್ತಪಡಿಸಿದರು. ಮಹಾರಾಷ್ಟ್ರದಲ್ಲೂ ಕೂಡಾ ಇದೇ ರೀತಿಯ ಉತ್ಸಾಹ ಕಂಡುಬಂದಿತು. ಮಧ್ಯಾಹ್ನ ಮೂರು ಗಂಟೆಗೆ ಪಂದ್ಯ ಆರಂಭವಾಗಲಿದ್ದು,  ಬೆಟ್ಟಿಂಗ್ ಭರಾಟೆ ಜೋರಾಗಿ ನಡೆಯುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com