"ಯಶಸ್ವಿಯಾಗಿ ಮುನ್ನಗ್ಗುತ್ತಿರುವ ತಂಡದ ಬಗ್ಗೆ ಏನೂ ಹೇಳಲು ಬಯಸುವುದಿಲ್ಲ. ಆದರೆ, ಶಿಖರ್ ಧವನ್ ಅವರ ಹೆಬ್ಬೆರಳಿಗೆ ಗಾಯ ಮಾಡಿಕೊಂಡು ಟೂರ್ನಿಯಿಂದ ಹೊರ ನಡೆದ ಬಳಿಕ ಮತ್ತೇ ಭಾರತ ತಂಡದಲ್ಲಿ ನಾಲ್ಕನೇ ಕ್ರಮಾಂಕದ ಸಮಸ್ಯೆಯಾಗಿದೆ. ಹಾಗಾಗಿ, ನಾಲ್ಕನೇ ಕ್ರಮಾಂಕದಲ್ಲಿ ಧೋನಿ ಆಡಿಸುವುದರಿಂದ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಜತೆಗೆ, ರವೀಂದ್ರ ಜಡೇಜಾ ಅವರನ್ನು ಹೆಚ್ಚುವರಿ ಸ್ಪಿನ್ನರ್ ಆಗಿ ಕಣಕ್ಕೆ ಇಳಿಸಬೇಕು ಎಂದು ಜೋನ್ಸ್ ಸ್ಟಾರ್ ಸ್ಪೋರ್ಟ್ಸ್ ನೇರಪ್ರಸಾರ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ.