ಇದೇ ವೇಳೆ ಟೀಂ ಇಂಡಿಯಾದ ಎಲ್ಲ ಆಟಗಾರರೂ ಪುಲ್ವಾಮ ಉಗ್ರ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಕ್ಕೆ ನೆರವು ನೀಡಲು ಮುಂದಾಗಿದ್ದು, ಇದೇ ಕಾರಣಕ್ಕೆ ಇಂದಿನ ಪಂದ್ಯದ ತಮ್ಮ ತಮ್ಮ ಸಂಪೂರ್ಣ ಸಂಭಾವನೆಯನ್ನು ಹುತಾತ್ಮ ಯೋಧರ ಕುಟುಂಬಕ್ಕೆ ಮತ್ತು ರಾಷ್ಟ್ರೀಯ ರಕ್ಷಣಾ ನಿಧಿಗೆ ಸಲ್ಲಿಕೆ ಮಾಡಲಿದ್ದಾರೆ. ಈ ಬಗ್ಗೆ ಮಾತಾನಾಡಿರುವ ತಂಡದ ನಾಯಕ ವಿರಾಟ್ ಕೊಹ್ಲಿ, ತಾವು ಮಾತ್ರವಲ್ಲದೇ ದೇಶದ ಪ್ರಜೆಗಳೂ ಕೂಡ ಸೈನಿಕರ ನಿಧಿಗೆ ಹಣ ನೀಡುವಂತೆ ಮನವಿ ಮಾಡಿದ್ದಾರೆ.