ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ಮೊದಲ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿತ್ತು. ಆದರೆ ನಂತರ ಮೂರು ಪಂದ್ಯಗಳಲ್ಲೂ ಸೋಲು ಕಾಣುವ ಮೂಲಕ ಸ್ವದೇಶದಲ್ಲೇ ಸರಣಿ ಸೋಲಿನ ನಿರಾಶೆ ಅನುಭವಿಸಿತ್ತು. ಇನ್ನು ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಆಯ್ಕೆ ಸಂಬಂಧ ಹಲವು ಕ್ರಿಕೆಟಿಗರಿಗೆ ಅವಕಾಶ ನೀಡಲಾಗಿದ್ದು ಈ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಳ್ಳದ ರಿಷಬ್ ಪಂತ್ ಹಾಗೂ ವಿಜಯ್ ಶಂಕರ್ ವಿರುದ್ಧ ಮಾಜಿ ಕ್ರಿಕೆಟಿಗ ಸಂಜಯ್ ಮಾಂಜ್ರೆಕರ್ ಕಿಡಿಕಾರಿದ್ದಾರೆ.