ಫೆ. 14 ರಂದು 2,500 ಮಂದಿ ಸಿಆರ್ಪಿಎಫ್ ಯೋಧರು, ಜಮ್ಮುವಿನಿಂದ ಶ್ರೀನಗರಕ್ಕೆ 78 ಬಸ್ ಗಳ ಮೂಲಕ ತೆರಳುತ್ತಿದ್ದರು. ಈ ವೇಳೆ ಪಾಕಿಸ್ತಾನ ಬೆಂಬಲಿತ ಜೈಷ್-ಈ-ಮೊಹಮ್ಮದ್ ಉಗ್ರ ಸಂಘಟನೆ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 40 ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದರು. ಇಲ್ಲಿಯವರೆಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮತ್ತು ಇತರೆ ಸಂಘ ಸಂಸ್ಥೆಗಳ ಹುತಾತ್ಮ ಯೋಧರ ಕುಟುಂಬಗಳಿಗೆ ದೇಣಿಗೆ ನೀಡಿದ್ದವು. ಇದೀಗ ಚೆನ್ನೈ ಸೂಪರ್ ಕಿಂಗ್ಸ್ ಪ್ರಾಂಚೈಸಿ ಕೂಡ ಮೊದಲ ಪಂದ್ಯದ ಆದಾಯವನ್ನು ಹುತಾತ್ಮ ಯೋಧರಿಗೆ ನೀಡಲು ಮುಂದಾಗಿದೆ.