ಈ ಬಾರಿ ಆರ್ಸಿಬಿ ಅಭಿಮಾನಿಗಳು ತಂಡಕ್ಕೆ ನೆರವು ಹಾಗೂ ಪ್ರೋತ್ಸಾಹ ನೀಡಿದ್ದು ಅದಕ್ಕೆ ನಾವು ಅಭಾರಿ. ಬೆಂಗಳೂರಿನಲ್ಲಿ ನಡೆದ ಎಲ್ಲಾ ಪಂದ್ಯಗಳಿಗೂ ನೀವು ಪ್ರೋತ್ಸಾಹ ನೀಡಿದ್ದೀರಿ. ಆದರೆ, ತಂಡ ಈ ಆವೃತ್ತಿಯಲ್ಲಿ ನಿರೀಕ್ಷಿತ ಆಟವಾಡುವಲ್ಲಿ ವಿಫಲವಾಗಿದೆ. ಅದಕ್ಕೆ ನಾವು ನಿಮ್ಮಲ್ಲಿ ಕ್ಷಮೆಯಾಚಿಸುತ್ತೇವೆ ಎಂದಿದ್ದಾರೆ.