ಆರ್ಸಿಬಿ ತಂಡ ಟೂರ್ನಿಯಿಂದ ಹೊರಬೀಳುತ್ತಿದ್ದಂತೆಯೆ ತಂಡದ ನಾಯಕ ವಿರಾಟ್ ಕೊಹ್ಲಿ ಸೋಲು ಗೆಲುವಿನಲ್ಲಿ ತಂಡವನ್ನು ಬೆಂಬಲಿಸಿದ ಅಭಿಮಾನಿಗಳಿಗೆ ಹಾಗೂ ಎಲ್ಲರಿಗೂ ಧನ್ಯವಾದ ತಿಳಿಸಿದ್ದರು. ಇದರ ಬೆನ್ನಲ್ಲೇ ವಿಜಯ್ ಮಲ್ಯ ಟ್ವೀಟ್ ಮಾಡಿ ಪ್ರತಿ ಆವೃತ್ತಿಯಲ್ಲಿ ಆರ್ಸಿಬಿ ಅತ್ಯುತ್ತಮ ತಂಡ. ಆದರೆ ಅದು ಪೇಪರ್ನಲ್ಲಿ ಮಾತ್ರ. ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿರುವುದು ತುಂಬಾ ನೋವಾಗಿದೆ ಎಂದು ಮಲ್ಯ ಟ್ವೀಟ್ ಮಾಡಿದ್ದಾರೆ.