ಆರ್‌ಸಿಬಿ ಅತ್ಯುತ್ತಮ ತಂಡ, ಅವರು ಪೇಪರ್‌ ಮೇಲಿನ ಹುಲಿಗಳು: ವಿಜಯ್ ಮಲ್ಯ ಗರಂ ಆಗಿದ್ದೇಕೆ?

ಈ ಬಾರಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆಯುವ ಮೂಲಕ ಟೂರ್ನಿಯಿಂದ ಹೊರಬಿದ್ದಿದ್ದು ಟೂರ್ನಿಯಿಂದ ಹೊರ ಬಂದ ಆರ್‌ಸಿಬಿ...
ವಿಜಯ್ ಮಲ್ಯ-ಆರ್ಸಿಬಿ
ವಿಜಯ್ ಮಲ್ಯ-ಆರ್ಸಿಬಿ
ಲಂಡನ್: ಈ ಬಾರಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆಯುವ ಮೂಲಕ ಟೂರ್ನಿಯಿಂದ ಹೊರಬಿದ್ದಿದ್ದು ಟೂರ್ನಿಯಿಂದ ಹೊರ ಬಂದ ಆರ್‌ಸಿಬಿ ತಂಡಕ್ಕೆ ಮಾಜಿ ಚೇರ್ಮೆನ್ ಹಾಗೂ ಮಾಲೀಕ ವಿಜಯ್ ಮಲ್ಯ ಸೋಲಿಗೆ ಕಾರಣ ತಿಳಿಸಿದ್ದಾರೆ.
ಆರ್‌ಸಿಬಿ ತಂಡ ಟೂರ್ನಿಯಿಂದ ಹೊರಬೀಳುತ್ತಿದ್ದಂತೆಯೆ ತಂಡದ ನಾಯಕ ವಿರಾಟ್ ಕೊಹ್ಲಿ ಸೋಲು ಗೆಲುವಿನಲ್ಲಿ ತಂಡವನ್ನು ಬೆಂಬಲಿಸಿದ ಅಭಿಮಾನಿಗಳಿಗೆ ಹಾಗೂ ಎಲ್ಲರಿಗೂ ಧನ್ಯವಾದ ತಿಳಿಸಿದ್ದರು. ಇದರ ಬೆನ್ನಲ್ಲೇ ವಿಜಯ್ ಮಲ್ಯ ಟ್ವೀಟ್ ಮಾಡಿ ಪ್ರತಿ ಆವೃತ್ತಿಯಲ್ಲಿ ಆರ್‌ಸಿಬಿ ಅತ್ಯುತ್ತಮ ತಂಡ. ಆದರೆ ಅದು ಪೇಪರ್‌ನಲ್ಲಿ ಮಾತ್ರ. ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿರುವುದು ತುಂಬಾ ನೋವಾಗಿದೆ ಎಂದು ಮಲ್ಯ ಟ್ವೀಟ್ ಮಾಡಿದ್ದಾರೆ.
ಆರ್‌ಸಿಬಿ ತಂಡ ಪೇಪರ್‌ನಲ್ಲಿ ಮಾತ್ರ ಬಲಿಷ್ಠವಾಗಿದೆ. ಆದರೆ ಮೈದಾನದಲ್ಲಿ ಅಲ್ಲ. ಇದು ಸೋಲಿಗೆ ಕಾರಣ ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com