25 ವರ್ಷದ ವಿನೋದ್ ಮುಂಬೈ ಸಬಾ ಕ್ರಿಕೆಟ್ ಅಕಾಡೆಮಿಯ ಅತ್ಯುತ್ತಮ ಆಲ್ ರೌಂಡರ್ ಆಗಿ ಗುರುತಿಸಿಕೊಂಡಿದ್ದರು. ಮುಂಬೈ ಸಬಾ ತಂಡದ ಪರವಾಗಿ ಕಣಕ್ಕಿಳಿಯುತ್ತಿರುವ ವಿನೋದ್ ಉತ್ತಮ ಫಾರ್ಮ್ ನಲ್ಲಿದ್ದರು. ಹೀಗಾಗಿ ಈ ಬಾರಿಯ ರಣಜಿ ತಂಡಕ್ಕೆ ಆಯ್ಕೆಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಇಂದು ಮುಂಜಾನೆ ತಮ್ಮ ಮನೆಯಲ್ಲಿ ವಿನೋದ್ ಹಾಗೂ ತಾಯಿ ಸಂಜೀವಿನ ಅವರ ಮೃತದೇಹಗಳು ಪತ್ತೆಯಾಗಿವೆ.