ಸಂದರ್ಶನವೊಂದರಲ್ಲಿ ಮಾತನಾಡಿದ ವಿಜಯ್ ಶಂಕರ್ ಅವರು ತಾವು ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿದ್ದು ಹೇಗೆ ಎಂಬುದನ್ನು ವಿವರಿಸಿದ್ದಾರೆ. ಕಳೆದ ಐಪಿಎಲ್ ನಲ್ಲಿ ಚೆನ್ನೈ ಪರ ಆಡಿದ್ದ ನಾನು ಶಾರ್ದೂಲ್ ಠಾಕೂರ್ ಎಸೆತದಲ್ಲಿ ಬೌಲ್ಡ್ ಆಗಿದ್ದೆ. ಆದರೆ ಅದು ನೋಬಾಲ್ ಆಗಿತ್ತು. ಹೀಗಾಗಿ ಒಂದು ಲೈಫ್ ಪಡೆದ ನಾನು ಅಂದಿನ ಪಂದ್ಯದಲ್ಲಿ 95 ರನ್ ಸಿಡಿಸಿದ್ದೆ. ಈ ಪಂದ್ಯದ ಆಟ ನನ್ನನ್ನು ಇಲ್ಲಿಗೆ ತಂದು ನಿಲ್ಲಿಸಿದೆ ಎಂದರು.