ನನ್ನಿಂದ ತಪ್ಪಾಗಿದೆ ಕ್ಷಮಿಸಿ; ಬಿಸಿಸಿಐಗೆ ಕ್ಷಮೆ ಕೋರಿದ ದಿನೇಶ್‌ ಕಾರ್ತಿಕ್‌

ಕೇಂದ್ರ ಗುತ್ತಿಗೆ ನಿಯಮ ಉಲ್ಲಂಘನೆ ಮಾಡಿದ್ದಾರೆಂದು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ನೀಡಿದ್ದ ನೋಟಿಸ್‌ಗೆ ಭಾರತ ತಂಡದ ವಿಕೆಟ್‌ ಕೀಪರ್ ದಿನೇಶ್‌ ಕಾರ್ತಿಕ್ ಉತ್ತರಿಸಿ ಕ್ಷಮಾಪಣೆ ಕೇಳಿದ್ದಾರೆ.
ದಿನೇಶ್ ಕಾರ್ತಿಕ್
ದಿನೇಶ್ ಕಾರ್ತಿಕ್

ನವದೆಹಲಿ: ಕೇಂದ್ರ ಗುತ್ತಿಗೆ ನಿಯಮ ಉಲ್ಲಂಘನೆ ಮಾಡಿದ್ದಾರೆಂದು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ನೀಡಿದ್ದ ನೋಟಿಸ್‌ಗೆ ಭಾರತ ತಂಡದ ವಿಕೆಟ್‌ ಕೀಪರ್ ದಿನೇಶ್‌ ಕಾರ್ತಿಕ್ ಉತ್ತರಿಸಿ ಕ್ಷಮಾಪಣೆ ಕೇಳಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ದಿನೇಶ್‌ ಕಾರ್ತಿಕ್‌ ಪೋರ್ಟ್‌ ಆಫ್‌ ಸ್ಪೇನ್‌ಗೆ ತೆರಳಿ ಕೆರಿಬಿಯನ್‌ ಪ್ರೀಮಿಯರ್‌ ಲೀಗ್‌ನ ಶಾರೂಖ್‌ ಖಾನ್‌ ಅವರ ನಾಯಕತ್ವದ ಟ್ರಿಬ್ಯಾಂಗೊ ನೈಟ್‌ ರೈಡರ್ಸ್‌ ತಂಡದ ಡ್ರೆಸ್ಸಿಂಗ್‌ ಕೊಠಡಿಯಲ್ಲಿ ಅದೇ ತಂಡದ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದರು. ಇದನ್ನು ಗಮನಿಸಿದ್ದ ಬಿಸಿಸಿಐ ಕೇಂದ್ರ ಗುತ್ತಿಗೆ ನಿಯಮ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಶೋಕಾಸ್‌ ನೋಟಿಸ್‌ ನೀಡಿ ಒಂದು ವಾರದೊಳಗೆ ಉತ್ತರ ನೀಡಬೇಕೆಂದು ತಿಳಿಸಿತ್ತು.

ಇದಕ್ಕೆ ಪ್ರತಿಕ್ರಿಯಿಸಿರುವ ದಿನೇಶ್‌ ಕಾರ್ತಿಕ್‌, ಕೆಕೆಆರ್‌ ಕೋಚ್‌ ಬ್ರೆಂಡನ್‌ ಮೆಕಲಮ್‌ ಅವರ ಕೋರಿಕೆಯ ಮೇರೆಗೆ ಪೋರ್ಟ್‌ ಆಫ್‌ ಸ್ಪೇನ್‌ಗೆ ತೆರಳಿದ್ದೆ. ಜತೆಗೆ, ನ್ಯೂಜಿಲೆಂಡ್‌ ಮಾಜಿ ನಾಯಕ ಹೇಳಿದ್ದರಿಂದ ಟಿಕೆಆರ್‌ ಜೆರ್ಸಿ ಧರಿಸಿದ್ದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com