ದೇಶದಲ್ಲಿ ಕೊರೋನಾ ಆರ್ಭಟ: 47ನೇ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ಸಚಿನ್ ತೆಂಡೂಲ್ಕರ್ ನಿರ್ಧಾರ

ದೇಶದಲ್ಲಿ ಕೊರೋನಾ ಮಹಾಮಾರಿ ನೂರಾರು ಜನರನ್ನು ಬಲಿ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಭಾರತದ ಕ್ರಿಕೆಟ್ ದಂತಕತೆ ಸಚಿವ್ ತೆಂಡೂಲ್ಕರ್ ಅವರು ತಮ್ಮ 47ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ.  
ಸಚಿನ್ ತೆಂಡೂಲ್ಕರ್
ಸಚಿನ್ ತೆಂಡೂಲ್ಕರ್
Updated on

ಮುಂಬೈ; ದೇಶದಲ್ಲಿ ಕೊರೋನಾ ಮಹಾಮಾರಿ ನೂರಾರು ಜನರನ್ನು ಬಲಿ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಭಾರತದ ಕ್ರಿಕೆಟ್ ದಂತಕತೆ ಸಚಿವ್ ತೆಂಡೂಲ್ಕರ್ ಅವರು ತಮ್ಮ 47ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. 

ಇದೇ ಏಪ್ರಿಲ್ 24 ರಂದು ಸಚಿನ್ ಅವರು 47ನೇ ವರ್ಷಕ್ಕೆ ಕಾಲಿರಿಸುತ್ತಿದ್ದಾರೆ. ಆದರೆ, ದೇಶ ಕೊರೋನಾ ಪಿಡುಗಿನ ವಿರುದ್ಧ ಹೋರಾಟ ನಡೆಸುತ್ತಿದ್ದು, ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವವರಿಗ ಗೌರವ ಸೂಚಿಸಿ ಸಚಿನ್ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ. 

ಇದು ಹುಟ್ಟುಹಬ್ಬ ಆಚರಿಸಿಕೊಳ್ಳಲು ಸೂಕ್ತ ಸಮಯವಲ್ಲ. ಹುಟ್ಟುಹಬ್ಬ ಆಚರಿಸದೆ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ವೈದ್ಯರು, ನರ್ಸ್ ಗಳು, ಅರೆ ವೈದ್ಯರು, ಪೊಲೀಸರು, ರಕ್ಷಣಾ ಸಿಬ್ಬಂದಿಗೆ ಗೌವರ ಸೂಚಿಸುವುದು ಅರ್ಥಪೂರ್ಣವಾಗಿದೆ ಎಂದು ಸಚಿನ್ ಭಾವಿಸಿದ್ದಾರೆಂದು ಮೂಲಗಳು ಮಾಹಿತಿ ನೀಡಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com