ರೋಹಿತ್ ಶರ್ಮಾ, ಫೋಗಾಟ್ ಗೆ ಖೇಲ್ ರತ್ನ, ಬೆಂಗಳೂರಿನ ಗಾಲ್ಫರ್ ಅದಿತಿ ಅಶೋಕ್‌ಗೆ ಅರ್ಜುನ ಪ್ರಶಸ್ತಿ!

ದೇಶದ ಕ್ರೀಡಾಪಟುಗಳನ್ನು ಉತ್ತೇಜಿಸುವ ಸಲುವಾಗಿ ಸರ್ಕಾರದಿಂದ ನೀಡಲಾಗುವ ಕ್ರೀಡಾ ಸಾಧಕ ಪ್ರಶಸ್ತಿಗಳ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ.
ರೋಹಿತ್ ಶರ್ಮಾ-ಅದಿತಿ ಅಶೋಕ್
ರೋಹಿತ್ ಶರ್ಮಾ-ಅದಿತಿ ಅಶೋಕ್
Updated on

ನವದೆಹಲಿ: ದೇಶದ ಕ್ರೀಡಾಪಟುಗಳನ್ನು ಉತ್ತೇಜಿಸುವ ಸಲುವಾಗಿ ಸರ್ಕಾರದಿಂದ ನೀಡಲಾಗುವ ಕ್ರೀಡಾ ಸಾಧಕ ಪ್ರಶಸ್ತಿಗಳ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ.

ಕ್ರಿಕೆಟಿಗ ರೋಹಿತ್ ಶರ್ಮ, ಕುಸ್ತಿಪಟು ವಿನೇಶ್ ಫೋಗಾಟ್, ಪ್ಯಾರಾ ಅಥ್ಲಿಟ್ ಮರಿಯಪ್ಪನ್ ತಂಗವೇಲು, ಟೇಬಲ್ ಟೆನಿಸ್ ಸ್ಟಾರ್ ಮನಿಕಾ ಬಾತ್ರಾ ಮತ್ತು ಹಾಕಿ ತಂಡದ ನಾಯಕ ರಾಣಿ ರಾಂಪಾಲ್ ಅವರಿಗೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಲಭಿಸಿದೆ.

ಇನ್ನು ಟೀಂ ಇಂಡಿಯಾದ ವೇಗಿ ಇಶಾಂತ್ ಶರ್ಮಾ, ಬೆಂಗಳೂರಿನ ಗಾಲ್ಫರ್ ಅದಿತಿ ಅಶೋಕ್, ದೀಪ್ತಿ ಶರ್ಮಾ ಸೇರಿದಂತೆ 27 ಮಂದಿ ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದಾರೆ. 

ದ್ರೋಣಚಾರ್ಯ ಪ್ರಶಸ್ತಿಗೆ ಧರ್ಮೆಂದ್ರಾ ತಿವಾರಿ(ಆರ್ಚರ್), ಪುರುಷೋತಮ್ ರೈ(ಅಥ್ಲೆಟಿಕ್ಸ್ ), ಶಿವ ಸಿಂಗ್(ಬಾಕ್ಸಿಂಗ್), ರೊಮೇಶ್ ಪೋಥನಿಯಾ(ಹಾಕಿ) ಸೇರಿದಂತೆ 8 ಮಂದಿ ಈ ಪ್ರಶಸ್ತಿ ಪಡೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com