ರಣಜಿ ಟ್ರೋಫಿ: ಜಮ್ಮು ಮತ್ತು ಕಾಶ್ಮೀರ ಬಗ್ಗು ಬಡಿದ ಕರ್ನಾಟಕ, ಸೆಮೀಸ್ ಗೆ ದಾಪುಗಾಲು!

ರಣಜಿ ಟ್ರೋಫಿ ಸರಣಿಯಲ್ಲಿ ಕರ್ನಾಟಕ ತಂಡದ ಗೆಲುವಿನ ನಗಾರಿ ಮುಂದುವರೆದಿದ್ದು, ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಮ್ಮು ಕಾಶ್ಮೀರ ತಂಡವನ್ನು ಭರ್ಜರಿ 167ರನ್ ಗಳ ಅಂತರದಲ್ಲಿ ಮಣಿಸಿ ಸೆಮಿ ಫೈನಲ್ ಪ್ರವೇಶ ಮಾಡಿದೆ.
ಕೆ ಗೌತಮ್ (ಸಂಗ್ರಹ ಚಿತ್ರ)
ಕೆ ಗೌತಮ್ (ಸಂಗ್ರಹ ಚಿತ್ರ)
Updated on

ಜಮ್ಮು: ರಣಜಿಟ್ರೋಫಿ ಸರಣಿಯಲ್ಲಿ ಕರ್ನಾಟಕ ತಂಡದ ಗೆಲುವಿನ ನಗಾರಿ ಮುಂದುವರೆದಿದ್ದು, ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಮ್ಮು ಕಾಶ್ಮೀರ ತಂಡವನ್ನು ಭರ್ಜರಿ 167ರನ್ ಗಳ ಅಂತರದಲ್ಲಿ ಮಣಿಸಿ ಸೆಮಿ ಫೈನಲ್ ಪ್ರವೇಶ ಮಾಡಿದೆ.

ಜಮ್ಮುವಿನಲ್ಲಿ ಇಂದು ಮುಕ್ತಾಯಗೊಂಡ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಮ್ಮು ಕಾಶ್ಮೀರ ತಂಡವನ್ನು ಕರ್ನಾಟಕ ತಂಡ 167ರನ್ ಗಳ ಅಂತರದಲ್ಲಿ ಮಣಿಸಿತು. ಕರ್ನಾಟಕ ನೀಡಿದ್ದ 331 ರನ್ ಗಳ ಬೃಹತ್ ಸವಾಲನ್ನು ಬೆನ್ನು ಹತ್ತಿದ ಜಮ್ಮು ಮತ್ತು ಕಾಶ್ಮೀರ ತಂಡ ಕರ್ನಾಟಕದ ಬೌಲರ್ ಗಳ ಮಾರಕ ಬೌಲಿಂಗ್ ಗೆ ತತ್ತರಿಸಿ ಕೇವಲ 164ರನ್ ಗಳಿಗೆ ಆಲೌಟ್ ಆಯಿತು. ಪ್ರಮುಖವಾಗಿ ಜಮ್ಮು ಮತ್ತು ಕಾಶ್ಮೀರ ತಂಡವನ್ನು ಕರ್ನಾಟಕದ ಕೆ ಗೌತಮ್ ಇನ್ನಿಲ್ಲದಂತೆ ಕಾಡಿದರು. ಗೌತಮ್ ಬರೊಬ್ಬರಿ 7 ವಿಕೆಟ್ ಪಡೆಯುವ ಮೂಲಕ ಕರ್ನಾಟಕದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದರು.

ಇನ್ನು ಸೆಮಿ ಫೈನಲ್ ನಲ್ಲಿ ಕರ್ನಾಟಕ ಪ್ರಬಲ ಬಂಗಾಳ ತಂಡವನ್ನು ಎದುರಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com