ಯುವ ಆಟಗಾರರಿಗೆ ಹೆಚ್ಚು ಅವಕಾಶ ನೀಡಬೇಕು, ತಂಡ ಬಲಗೊಳ್ಳುತ್ತದೆ: ವಿರಾಟ್ ಕೊಹ್ಲಿ

ಯುವ ಆಟಗಾರರು ಸಿಕ್ಕ ಅವಕಾಶವನ್ನು ಬಳಸಿಕೊಂಡು ತಂಡದ ಗೆಲುವಿನಲ್ಲಿ ಮಿಂಚಿದ್ದಾರೆ ಎಂದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ತಿಳಿಸಿದ್ದಾರೆ.
ಟೀಂ ಇಂಡಿಯಾ
ಟೀಂ ಇಂಡಿಯಾ
Updated on

ಇಂದೋರ್: ಯುವ ಆಟಗಾರರು ಸಿಕ್ಕ ಅವಕಾಶವನ್ನು ಬಳಸಿಕೊಂಡು ತಂಡದ ಗೆಲುವಿನಲ್ಲಿ ಮಿಂಚಿದ್ದಾರೆ ಎಂದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ತಿಳಿಸಿದ್ದಾರೆ. 

ಗುವಾಹಟಿಯಲ್ಲಿ ನಡೆದಿದ್ದ ಮೊದಲ ಟಿ-20 ಪಂದ್ಯ ಮಳೆಯಿಂದ ರದ್ದಾಗಿದ್ದರಿಂದ, ಎರಡನೇ ಟಿ-20 ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿತ್ತು. ಈ ಪಂದ್ಯವನ್ನು ಗೆದ್ದಿರುವ ಆತಿಥೇತ ತಂಡ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಎರಡನೇ ಟಿ20 ಪಂದ್ಯದಲ್ಲಿ ಯುವ ಬೌಲರ್ ಗಳಾದ ಶಾರ್ದೂಲ್ ಠಾಕೂರ್ 3 ವಿಕೆಟ್, ಶೈನಿ 2 ವಿಕೆಟ್ ಪಡೆದು ಮಿಂಚಿದ್ದರು. ಇನ್ನು ಬ್ಯಾಟಿಂಗ್ ವಿಭಾಗದಲ್ಲಿ ಶ್ರೇಯಸ್ ಅಯ್ಯರ್ ಸಹ 34 ರನ್ ಗಳ ಸ್ಫೋಟಕ ಬ್ಯಾಟಿಂಗ್ ಮಾಡಿದ್ದರು. ಹೀಗಾಗಿ ವಿರಾಟ್ ಕೊಹ್ಲಿ ಯುವ ಆಟಗಾರರನ್ನು ಶ್ಲಾಘಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com