ಆರ್‌ಸಿಬಿಗೆ ಆಘಾತ: ವೇಗಿ ನವದೀಪ್ ಸೈನಿಗೆ ಗಾಯ, ಮುಂದಿನ ಪಂದ್ಯಕ್ಕೆ ಅನುಮಾನ

ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದ ವೇಗದ ಬೌಲರ್ ನವದೀಪ್ ಸೈನಿ ಗಾಯಗೊಂಡಿದ್ದು, ಮುಂದಿನ ಪಂದ್ಯದಲ್ಲಿ ಅವರು ಆಡುವುದು ಅನುಮಾನಾಸ್ಪದವಾಗಿದೆ.
ನವದೀಪ್ ಸೈನಿ
ನವದೀಪ್ ಸೈನಿ
Updated on

ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದ ವೇಗದ ಬೌಲರ್ ನವದೀಪ್ ಸೈನಿ ಗಾಯಗೊಂಡಿದ್ದು, ಮುಂದಿನ ಪಂದ್ಯದಲ್ಲಿ ಅವರು ಆಡುವುದು ಅನುಮಾನಾಸ್ಪದವಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಸೈನಿ ಬಲಗೈಗೆ ಪೆಟ್ಟು ಬಿದ್ದು, ಅಕ್ಟೋಬರ್ 28ರಂದು ಮುಂಬೈ ಇಂಡಿಯನ್ಸ್ ವಿರುದ್ಧದ ಮುಂದಿನ ಪಂದ್ಯದಲ್ಲಿ ಇವರು ಆಡುವುದು ಅನುಮಾನ ಎನ್ನಲಾಗಿದೆ. 

ಚೆನ್ನೈ ವಿರುದ್ಧದ ಪಂದ್ಯದ ಇನ್ನಿಂಗ್ಸ್‌ನ 18ನೇ ಓವರ್‌ನ ಕೊನೆಯ ಎಸೆತದಲ್ಲಿ ಬ್ಯಾಟ್ಸ್‌ಮನ್ ಹೊಡೆತವನ್ನು ನಿಲ್ಲಿಸಲು ಮುಂದಾಗಿ ಸೈನಿ ಗಾಯಗೊಂಡರು, ನಂತರ ಅವರು ಮೈದಾನದಿಂದ ಹೊರ ನಡೆದಿದ್ದರು.

ಐಪಿಎಲ್ 13ನೇ ಆವೃತ್ತಿಯಲ್ಲಿ ಆರ್‌ಸಿಬಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಇನ್ನು 11 ಪಂದ್ಯಗಳ ಪೈಕಿ 7 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು 14 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com