ನವದೆಹಲಿ: ಭಾರತದ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾದ ಮಹೇಂದ್ರ ಸಿಂಗ್ ಧೋನಿ ಸ್ವಾತಂತ್ರ್ಯ ದಿನದಂದು ಶನಿವಾರ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕ್ರಿಕೆಟ್ ದಂತಕಥೆ ಮತ್ತು ಭಾರತ ರತ್ನ
ಸಚಿನ್ ತೆಂಡೂಲ್ಕರ್ ಅವರು ಭಾರತೀಯ ಕ್ರಿಕೆಟ್ಗೆ ಧೋನಿ ನೀಡಿದ ಕೊಡುಗೆ ಮರೆಯಲಾಗದು ಎಂದು ಹೇಳಿದ್ದಾರೆ.
ದೇಶಕ್ಕಾಗಿ ನೀವು ಎಲ್ಲವನ್ನು ಮಾಡಿದ್ದೀರಿ ಎಂದು ಟೀಂ ಇಂಡಿಯಾ ಆರಂಭಿಕ ಆಟಗಾರ ಶಿಖರ್ ಧವನ್ ಪ್ರತಿಕ್ರಿಯಿಸಿದ್ದಾರೆ. ಧೋನಿ ಮುಂದಿನ ಭವಿಷ್ಯ ಉತ್ತಮವಾಗಿರಲಿ ಎಂದು ಅಶ್ವಿನ್, ಹಾರ್ದಿಕ್ ಪಾಂಡ್ಯ, ಮೊಹಮದ್ ಕೈಪ್ , ಕೇವಿನ್ ಪೀಟರ್ ಸನ್, ವಾಸೀಂ ಅಕ್ರಮ್, ಮತ್ತಿತರ ಹಾಲಿ ಹಾಗೂ ಮಾಜಿ ಆಟಗಾರರು ಶುಭ ಹಾರೈಸಿದ್ದಾರೆ.
Advertisement