ಯುವ ಆಟಗಾರರಿಗೆ ಹೆಚ್ಚು ಅವಕಾಶ ನೀಡಬೇಕು, ತಂಡ ಬಲಗೊಳ್ಳುತ್ತದೆ: ವಿರಾಟ್ ಕೊಹ್ಲಿ

ಯುವ ಆಟಗಾರರು ಸಿಕ್ಕ ಅವಕಾಶವನ್ನು ಬಳಸಿಕೊಂಡು ತಂಡದ ಗೆಲುವಿನಲ್ಲಿ ಮಿಂಚಿದ್ದಾರೆ ಎಂದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ತಿಳಿಸಿದ್ದಾರೆ.
ಟೀಂ ಇಂಡಿಯಾ
ಟೀಂ ಇಂಡಿಯಾ

ಇಂದೋರ್: ಯುವ ಆಟಗಾರರು ಸಿಕ್ಕ ಅವಕಾಶವನ್ನು ಬಳಸಿಕೊಂಡು ತಂಡದ ಗೆಲುವಿನಲ್ಲಿ ಮಿಂಚಿದ್ದಾರೆ ಎಂದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ತಿಳಿಸಿದ್ದಾರೆ. 

ಗುವಾಹಟಿಯಲ್ಲಿ ನಡೆದಿದ್ದ ಮೊದಲ ಟಿ-20 ಪಂದ್ಯ ಮಳೆಯಿಂದ ರದ್ದಾಗಿದ್ದರಿಂದ, ಎರಡನೇ ಟಿ-20 ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿತ್ತು. ಈ ಪಂದ್ಯವನ್ನು ಗೆದ್ದಿರುವ ಆತಿಥೇತ ತಂಡ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಎರಡನೇ ಟಿ20 ಪಂದ್ಯದಲ್ಲಿ ಯುವ ಬೌಲರ್ ಗಳಾದ ಶಾರ್ದೂಲ್ ಠಾಕೂರ್ 3 ವಿಕೆಟ್, ಶೈನಿ 2 ವಿಕೆಟ್ ಪಡೆದು ಮಿಂಚಿದ್ದರು. ಇನ್ನು ಬ್ಯಾಟಿಂಗ್ ವಿಭಾಗದಲ್ಲಿ ಶ್ರೇಯಸ್ ಅಯ್ಯರ್ ಸಹ 34 ರನ್ ಗಳ ಸ್ಫೋಟಕ ಬ್ಯಾಟಿಂಗ್ ಮಾಡಿದ್ದರು. ಹೀಗಾಗಿ ವಿರಾಟ್ ಕೊಹ್ಲಿ ಯುವ ಆಟಗಾರರನ್ನು ಶ್ಲಾಘಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com