ಐಪಿಎಲ್‌ನಲ್ಲಿ ಮಿಂಚದಿದ್ರೆ ಟೀಂ ಇಂಡಿಯಾಗೆ ಮರಳುವ ಛಾನ್ಸ್ ಇಲ್ಲ: ಧೋನಿಗೆ ಬಿಸಿಸಿಐ ಖಡಕ್ ಸೂಚನೆ!

2019ರ ವಿಶ್ವಕಪ್ ಟೂರ್ನಿ ಬಳಿಕ ಎಂಎಸ್ ಧೋನಿ ಟೀಂ ಇಂಡಿಯಾದಿಂದ ದೂರ ಉಳಿದಿದ್ದಾರೆ. ಇನ್ನು ಧೋನಿ ತಂಡಕ್ಕೆ ರೀ ಎಂಟ್ರಿ ನೀಡುವ ವಿಚಾರವಾಗಿ ಬಿಸಿಸಿಐ ಆಯ್ಕೆ ಸಮಿತಿ ಸ್ಪಷ್ಟನೆ ನೀಡಿದೆ.
ಎಂಎಸ್ ಧೋನಿ-ಸುನೀಲ್ ಜೋಶಿ
ಎಂಎಸ್ ಧೋನಿ-ಸುನೀಲ್ ಜೋಶಿ

ಮುಂಬೈ: 2019ರ ವಿಶ್ವಕಪ್ ಟೂರ್ನಿ ಬಳಿಕ ಎಂಎಸ್ ಧೋನಿ ಟೀಂ ಇಂಡಿಯಾದಿಂದ ದೂರ ಉಳಿದಿದ್ದಾರೆ. ಇನ್ನು ಧೋನಿ ತಂಡಕ್ಕೆ ರೀ ಎಂಟ್ರಿ ನೀಡುವ ವಿಚಾರವಾಗಿ ಬಿಸಿಸಿಐ ಆಯ್ಕೆ ಸಮಿತಿ ಸ್ಪಷ್ಟನೆ ನೀಡಿದೆ. 

ಅಕ್ಟೋಬರ್ ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ರೇಸ್ ನಲ್ಲಿ ಎಂಎಸ್ ಧೋನಿ ನಿಲ್ಲಬೇಕಾದರೆ ಐಪಿಎಲ್ 2020ರ ಆವೃತ್ತಿಯಲ್ಲಿ ತಮ್ಮ ಸಾಮರ್ಥ್ಯವನ್ನು ನಿರೂಪಿಸಬೇಕು ಎಂದು ಆಯ್ಕೆ ಸಮಿತಿ ಸ್ಪಷ್ಟಪಡಿಸಿದೆ. 

ಎಂಎಸ್ ಧೋನಿ ಅದಾಗಲೇ ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ಕೆ) ತರಬೇತಿ ಶಿಬಿರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇನ್ನು ಮಾರ್ಚ್ 29ರಿಂದ ಐಪಿಎಲ್ 2020ರ ಟೂರ್ನಿ ಆರಂಭವಾಗಲಿದೆ. 

ಕನ್ನಡಿಗ ಸುನೀಲ್ ಜೋಶಿ ಕಳೆದ ವಾರ ಬಿಸಿಸಿಐ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದು ಅವರ ಅಧ್ಯಕ್ಷತೆಯಲ್ಲಿ ಎಂಎಸ್ ಧೋನಿ ಕಮ್ ಬ್ಯಾಕ್ ಕುರಿತಂತೆ ಚರ್ಚೆಗಳು ನಡೆಯಲಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com