ಐಪಿಎಲ್‌ನಿಂದ ಆರ್‌ಸಿಬಿ ಔಟ್: ಟ್ವಿಟ್ಟರ್‌ನಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡ ನಾಯಕ ಕೊಹ್ಲಿ

ಹಾಲಿ ಐಪಿಎಲ್ ಟೂರ್ನಿಯಲ್ಲೂ ನಿರಾಸೆ ಮೂಡಿಸಿ ಟೂರ್ನಿಯಿಂದ ನಿರ್ಗಮಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ, ಟ್ವಿಟ್ಟರ್‌ನಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.
ವಿರಾಟ್ ಕೊಹ್ಲಿ ಮತ್ತು ತಂಡ
ವಿರಾಟ್ ಕೊಹ್ಲಿ ಮತ್ತು ತಂಡ

ದುಬೈ: ಹಾಲಿ ಐಪಿಎಲ್ ಟೂರ್ನಿಯಲ್ಲೂ ನಿರಾಸೆ ಮೂಡಿಸಿ ಟೂರ್ನಿಯಿಂದ ನಿರ್ಗಮಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ, ಟ್ವಿಟ್ಟರ್‌ನಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.

ಶುಕ್ರವಾರ ನಡೆದ ಎಲಿಮಿನೇಟರ್ ಸುತ್ತಿನಲ್ಲಿ ರಾಯಲ್ ಚಾಲೆಂಜರ್ಸ್ ತಂಡ ಸನ್‌ರೈಸರ್ಸ್ ಹೈದರಾಬಾದ್ ವಿರುದ್ದ ಆರು ವಿಕೆಟ್‌ಗಳಿಂದ ಸೋತು ಟೂರ್ನಿಯಿಂದ ಹೊರ ಬಿತ್ತು. ಇದೀಗ ನಾಯಕ ವಿರಾಟ್ ಕೊಹ್ಲಿ ಟ್ವಿಟ್ಟರ್‌ನಲ್ಲಿ ತಂಡದ ಗ್ರೂಪ್ ಫೋಟೋ ಅಪ್ಲೋಡ್ ಮಾಡಿ, ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.

"ಏರಿಳಿತದಲ್ಲಿ ಒಟ್ಟಿಗೆ ಸಾಗಿದ್ದೇವೆ. ಒಂದು ಘಟಕವಾಗಿ ಇದೊಂದು ನಮ್ಮ ಶ್ರೇಷ್ಟ ಪಯಣ. ಹೌದು, ಕೆಲವೊಂದು ವಿಷಯ ನಾವು ಯೋಚಿಸಿದಂತೆ ನಡೆಯಲಿಲ್ಲ. ಆದರೆ, ಇಡೀ ತಂಡದ ಬಗ್ಗೆ ಹೆಮ್ಮೆ ಇದೆ. ನಿಮ್ಮ ಬೆಂಬಲಕ್ಕಾಗಿ ನಮ್ಮ ಎಲ್ಲ ಅಭಿಮಾನಿಗಳಿಗೆ ಧನ್ಯವಾದಗಳು. ನಿಮ್ಮ ಪ್ರೀತಿ ನಮ್ಮನ್ನು ಶಕ್ತಿಶಾಲಿಯನ್ನಾಗಿಸುತ್ತದೆ. ನಿಮ್ಮೆಲ್ಲರನ್ನೂ ಶೀಘ್ರವೇ ನೋಡುವೆ'' ಎಂದು ವಿರಾಟ್ ಕೊಹ್ಲಿ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com