ಸಿಡ್ನಿ: ಭಾರತ-ಆಸೀಸ್ ನಡುವಣ ಪಂದ್ಯದ ವೇಳೆ ಅದಾನಿ ವಿರುದ್ಧ ಪ್ಲೇಕಾರ್ಡ್ ಪ್ರದರ್ಶಿಸಿ ಆಕ್ರೋಶ, ವಿಡಿಯೋ!

ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದ ವೇಳೆ ಪ್ರತಿಭಟನಾಕಾರರು ಮೈದಾನಕ್ಕಿಳಿದು ಭಾರತದ ಉದ್ಯಮಿ ಗೌತಮ್ ಶಾಂತಿಲಾಲ್ ಅದಾನಿ ವಿರುದ್ಧ ಪ್ರತಿಭಟನೆ ನಡೆಸಿ ಕೆಲ ಕಾಲ ಪಂದ್ಯಕ್ಕೆ ಅಡ್ಡಿ ಪಡಿಸಿದರು. 
ಪ್ರತಿಭಟನೆಯ ಚಿತ್ರ
ಪ್ರತಿಭಟನೆಯ ಚಿತ್ರ

ಸಿಡ್ನಿ: ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದ ವೇಳೆ ಪ್ರತಿಭಟನಾಕಾರರು ಮೈದಾನಕ್ಕಿಳಿದು ಭಾರತದ ಉದ್ಯಮಿ ಗೌತಮ್ ಶಾಂತಿಲಾಲ್ ಅದಾನಿ ವಿರುದ್ಧ ಪ್ರತಿಭಟನೆ ನಡೆಸಿ ಕೆಲ ಕಾಲ ಪಂದ್ಯಕ್ಕೆ ಅಡ್ಡಿ ಪಡಿಸಿದರು. 

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಇಂದು ಏಕದಿನ ಪಂದ್ಯ ನಡೆಯುತ್ತಿತ್ತು ಈ ವೇಳೆ ಪ್ರತಿಭಟನಾಕಾರರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ,  ಅದಾನಿಗೆ 1 ಬಿಲಿಯನ್ ಡಾಲರ್ ಸಾಲ ನೀಡಬೇಡಿ ಎಂದು ಬರೆದಿರುವ ಪ್ಲೇ ಕಾರ್ಡ್ ಪ್ರದರ್ಶಿಸಿದರು. 

ಅದಾನಿಯನ್ನು ತಡೆಯಿರಿ, ಕಲ್ಲಿದ್ದಲು ಗಣಿಗಾರಿಕೆ ನಿಲ್ಲಿಸಿ ಎಂದು ಬರೆದಿರುವ ಜೆರ್ಸಿಯನ್ನು ಪ್ರತಿಭಟನಾಕಾರರು ಧರಿಸಿದ್ದರು. 

ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್ ನಲ್ಲಿ ಕಲ್ಲಿದ್ದಲು ಗಣಿ ನಿರ್ಮಿಸುವ ಯೋಜನೆಯ ವಿರುದ್ಧ ಹೀಗೆ ಪ್ರತಿಭಟಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com