ಟಿ20 ವಿಶ್ವಕಪ್: ಎಂಎಸ್ ಧೋನಿ ಇಲ್ಲದ್ದಕ್ಕೆ ಫಿನಿಶರ್ ಭಾರ ನನ್ನ ಮೇಲಿದೆ- ಹಾರ್ದಿಕ್ ಪಾಂಡ್ಯ

ಟಿ20 ವಿಶ್ವಕಪ್ ಅಭಿಯಾನಕ್ಕೂ ಮುನ್ನ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಬಗ್ಗೆ ಒಂದು ದೊಡ್ಡ ವಿಚಾರವನ್ನು ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಬಾಯ್ಬಿಟ್ಟಿದ್ದಾರೆ.
ಹಾರ್ದಿಕ್ ಪಾಂಡ್ಯ
ಹಾರ್ದಿಕ್ ಪಾಂಡ್ಯ
Updated on

ದುಬೈ: ಟಿ20 ವಿಶ್ವಕಪ್ ಅಭಿಯಾನಕ್ಕೂ ಮುನ್ನ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಬಗ್ಗೆ ಒಂದು ದೊಡ್ಡ ವಿಚಾರವನ್ನು ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಬಾಯ್ಬಿಟ್ಟಿದ್ದಾರೆ.

ಮಹೇಂದ್ರ ಸಿಂಗ್ ಧೋನಿ ಅನುಪಸ್ಥಿತಿಯಲ್ಲಿ ಮೊದಲ ಬಾರಿ ಟಿ-20 ವಿಶ್ವಕಪ್ ಆಡಬೇಕಿದೆ. ಪ್ರಮುಖ ಪಂದ್ಯಗಳಲ್ಲಿ ಮಹೇಂದ್ರ ಸಿಂಗ್ ಧೋನಿ ಗ್ರೇಟ್ ಫಿನಿಶರ್ ಆಗಿ ಹೊರಹೊಮ್ಮುತ್ತಿದ್ದರು. ತನಗೆ ಸಹೋದರ ಹಾಗೂ ಜೀವನದ ತರಬೇತುದಾರನಾಗಿರುವ ಧೋನಿ ಅನುಪಸ್ಥಿತಿಯಲ್ಲಿ ಫಿನಿಶರ್ ಎಂಬ ಭಾರವನ್ನು ತಾನು ಹೊರಬೇಕಾಗಿದೆ ಅಂತಾ ಹೇಳಿದ್ದಾರೆ.

ಇ ಎಸ್ ಪಿ ಎನ್ ಕ್ರಿಕ್ ಇನ್ಫೋಗೆ ನೀಡಿರುವ ಸಂದರ್ಶನದಲ್ಲಿ ಹಾರ್ದಿಕ್ ಪಾಂಡ್ಯ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಜೀವನದುದ್ದಕ್ಕೂ ತಾವು ಅನುಭವಿಸಿದ ಸವಾಲುಗಳು ಹಾಗೂ ಮಹೇಂದ್ರ ಸಿಂಗ್ ಧೋನಿಯೊಂದಿಗಿನ ಅಸಾಧಾರಣ ಬಾಂಧವ್ಯದ ಬಗ್ಗೆ ಮಾಧ್ಯಮದೊಂದಿಗೆ ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com