ಮುಂಬೈ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 14ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಾಜಸ್ತಾನ ರಾಯಲ್ಸ್ ವಿರುದ್ಧ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತ ರಾಜಸ್ತಾನ ಬ್ಯಾಟಿಂಗ್ ಮಾಡುತ್ತಿದ್ದು ಆರಂಭಿಕ ಆಘಾತ ಎದುರಿಸಿದೆ. 5 ಓವರ್ ಮುಕ್ತಾಯಕ್ಕೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
ರಾಜಸ್ತಾನ ಪರ ಜೋಸ್ ಬಟ್ಲರ್ 8, ಮನನ್ ವೊವ್ರಾ 7 ಮತ್ತು ಡೇವಿಡ್ ಮಿಲ್ಲರ್ ಶೂನ್ಯಕ್ಕೆ ಔಟಾಗಿದ್ದಾರೆ. ಸಂಜು ಸ್ಯಾಮ್ಸನ್ ಮತ್ತು ಶಿವಂ ದುಬೆ ಬ್ಯಾಟಿಂಗ್ ಮಾಡುತ್ತಿದ್ದಾರೆ.
ಬೆಂಗಳೂರು ಪರ ಮೊಹಮ್ಮದ್ ಸಿರಾಜ್ 2 ಮತ್ತು ಜ್ಯಾಮಿನ್ಸನ್ 1 ವಿಕೆಟ್ ಪಡೆದಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಶಹಬಾಜ್ ಅಹ್ಮದ್, ಗ್ಲೆನ್ ಮ್ಯಾಕ್ಸ್ ವೆಲ್, ಎಬಿ ಡಿವಿಲಿಯರ್ಸ್(ಕೀಪರ್), ವಾಷಿಂಗ್ಟನ್ ಸುಂದರ್, ಕೈಲ್ ಜೇಮೀಸನ್, ಕೇನ್ ರಿಚರ್ಡ್ಸನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಲ್.
Advertisement