ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 14ನೇ ಆವೃತ್ತಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ ನಂತರ ದೆಹಲಿ ಕ್ಯಾಪಿಟಲ್ಸ್ ಆರಂಭಿಕ ಪೃಥ್ವಿ ಶಾ ರಜೆಯ ಮಜಾಕ್ಕಾಗಿ ಗೋವಾಕ್ಕೆ ತೆರಳುತ್ತಿದ್ದರು.
ಪೃಥ್ವಿ ಶಾರನ್ನು ಮಹಾರಾಷ್ಟ್ರದ ಅಂಬೋಲಿಯಲ್ಲಿ ಪೊಲೀಸರು ತಡೆದರು. ಪೃಥ್ವಿ ಇ-ಪಾಸ್ ಇಲ್ಲದೆ ಗೋವಾಕ್ಕೆ ಹೋಗುತ್ತಿದ್ದರು. ಇ-ಪಾಸ್ ಇಲ್ಲದ ಕಾರಣ ಪೊಲೀಸರು ಅವರನ್ನು ಮುಂದೆ ಹೋಗಲು ಅನುಮತಿಸಲಿಲ್ಲ.
ಭಾರತದಲ್ಲಿ ಕೋವಿಡ್-19 ಎರಡನೇ ಅಲೆ ನಡುವೆ ಪ್ರಸ್ತುತ ಮಹಾರಾಷ್ಟ್ರದಲ್ಲಿ ಲಾಕ್ಡೌನ್ ಜಾರಿಯಲ್ಲಿದೆ ಮತ್ತು ವಿವಿಧ ನಿರ್ಬಂಧಗಳನ್ನು ವಿಧಿಸಲಾಗಿದೆ.
ಪೃಥ್ವಿ ಶಾ ಅವರು ಪಾಸ್ ಗಾಗಿ ಸಲ್ಲಿಸಿದ್ದ ಅರ್ಜಿಯನ್ನೇ ತೆಗೆದುಕೊಂಡು ಗೋವಾಕ್ಕೆ ಪ್ರಮಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಇನ್ನು ಪೊಲೀಸರು ತಡೆದ ನಂತರ ಮತ್ತೊಮ್ಮೆ ಪಾಸ್ ಗಾಗಿ ಅರ್ಜಿ ಸಲ್ಲಿಸಿದರು. ಒಂದು ಗಂಟೆಯಲ್ಲಿ ಪಾಸ್ ಸಿಕ್ಕಿದ್ದು ಆನಂತರ ತಮ್ಮ ಪ್ರಯಾಣವನ್ನು ಮುಂದುವರೆಸಿದ್ದಾರೆ.
Advertisement