social_icon

ಏನು ಮಾಡಬೇಕಿತ್ತೋ ಅದನ್ನು ಮಾಡಿದ್ದೇವೆ.. ಇನ್ನೇನಿದ್ದರೂ ನವೆಂಬರ್ 7ರ ಪಂದ್ಯದ ಮೇಲೆ ಗಮನ: ವಿರಾಟ್ ಕೊಹ್ಲಿ

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮೀಸ್ ಹಂತಕ್ಕೇರಲು ಹರಸಾಹಸ ಪಡುತ್ತಿರುವ ಟೀಂ ಇಂಡಿಯಾ ಇದೀಗ ನವೆಂಬರ್ ರಂದು ನಡೆಯಲಿರುವ ಆಫ್ಘಾನಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದ ಮೇಲೆ ಗಮನ ಕೇಂದ್ರೀಕರಿಸಿದೆ ಎಂದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

Published: 06th November 2021 12:53 AM  |   Last Updated: 06th November 2021 01:41 PM   |  A+A-


Virat Kohli at press meet after T20 world cup match

ಪಂದ್ಯದ ಬಳಿಕ ಪತ್ರಿಕಾಗೋಷ್ಠಿ ವೇಳೆ ವಿರಾಟ್ ಕೊಹ್ಲಿ

Posted By : srinivasamurthy
Source : Online Desk

ದುಬೈ: ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮೀಸ್ ಹಂತಕ್ಕೇರಲು ಹರಸಾಹಸ ಪಡುತ್ತಿರುವ ಟೀಂ ಇಂಡಿಯಾ ಇದೀಗ ನವೆಂಬರ್ ರಂದು ನಡೆಯಲಿರುವ ಆಫ್ಘಾನಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದ ಮೇಲೆ ಗಮನ ಕೇಂದ್ರೀಕರಿಸಿದೆ ಎಂದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ಇದನ್ನೂ ಓದಿ: 8ನೇ ಬಾರಿಗೆ 100ಕ್ಕಿಂತ ಕಡಿಮೆ ರನ್ ಗೆ ಆಲೌಟ್, ಟಿ20 ವಿಶ್ವಕಪ್ ಇತಿಹಾಸದಲ್ಲಿ 2ನೇ ನಿದರ್ಶನ

ಇಂದು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಾಯಕ ವಿರಾಟ್ ಕೊಹ್ಲಿ.. ನಿಜಕ್ಕೂ ಇಂದಿನ ಪಂದ್ಯದಲ್ಲಿ ಎಲ್ಲ ವಿಭಾಗದಲ್ಲೂ ಮೇಲುಗೈ ಪ್ರದರ್ಶನ ತೋರಿದೆವು. ಟೂರ್ನಿಯಲ್ಲಿ ಜೀವಂತವಾಗಿ ಉಳಿಯಲು ಏನು ಮಾಡಬೇಕಿತ್ತೋ ಅದನ್ನು ಮಾಡಿದ್ದೇವೆ.. ಇನ್ನೇನಿದ್ದರೂ ನ.7ರ ಪಂದ್ಯ ಏನಾಗುತ್ತದೆ ಎಂಬುದನ್ನು ನೋಡಬೇಕಿದೆ ಎಂದು ಹೇಳಿದರು.

ಇದನ್ನೂ ಓದಿ: ಟಿ20 ವಿಶ್ವಕಪ್:  85 ರನ್ ಗಳಿಗೆ ಆಲೌಟ್, ಭಾರತದ ವಿರುದ್ಧ ಹೀನಾಯ ದಾಖಲೆ ಬರೆದ ಸ್ಕಾಟ್ಲೆಂಡ್

'ಇಂದಿನ ಪ್ರದರ್ಶನದ ಬಗ್ಗೆ ಹೆಚ್ಚು ಹೇಳಲು ಬಯಸುವುದಿಲ್ಲ, ನಾವು ಏನು ಮಾಡಬಹುದು ಎಂದು ನಮಗೆ ತಿಳಿದಿದೆ. ಈ ಸ್ಥಳದಲ್ಲಿ ಟಾಸ್ ಎಷ್ಟು ಮಹತ್ವದ್ದಾಗಿರಬಹುದು ಎಂಬುದನ್ನು ಸಹ ನಿಮಗೆ ತಿಳಿಸುತ್ತದೆ. ನಾವು ಅವರನ್ನು ಗರಿಷ್ಠ 110-120ರನ್ ಗಳೊಳಗೆ ನಿಯಂತ್ರಿಸಬೇಕು ಎಂದು ಲೆಕ್ಕಾಚಾರ ಮತ್ತು ಗೇಮ್ ಪ್ಲಾನ್ ಮಾಡಿದ್ದೆವು.  

ಇದನ್ನೂ ಓದಿ: ಟಿ20 ವಿಶ್ವಕಪ್: 'ಭಾರತದ ಪರ ಗರಿಷ್ಠ ವಿಕೆಟ್ ಪಡೆದ ಬೌಲರ್', ಜಸ್ ಪ್ರೀತ್ ಬುಮ್ರಾ ಹಿರಿಮೆಗೆ ಮತ್ತೊಂದು ಗರಿ

ಅದಕ್ಕೆ ತಕ್ಕಂತೆ ನಮ್ಮ ಬೌಲರ್ ಗಳು ಅತ್ಯುತ್ತಮ ಪ್ರದರ್ಶನ ತೋರಿದರು. ಬಳಿಕ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಉತ್ತಮ ಬ್ಯಾಟಿಂಗ್ ಮೂಲಕ ನಮಗೆ ಬೇಕಾದ ರನ್ ರೇಟ್ ತಂದರು. ನಾವು 8ರಿಂದ 10 ಓವರ್ ಗಳೊಳಗೆ ಪಂದ್ಯ ಮುಕ್ತಾಯ ಮಾಡುವ ಯೋಜನೆ ರೂಪಿಸಿದ್ದೆವು. ಆದರೆ ರೋಹಿತ್ ಮತ್ತು ರಾಹುಲ್ ಇನ್ನೂ ಬೇಗನೆ ಮುಕ್ತಾಯ ಮಾಡಲು ನೆರವಾದರು ಎಂದು ಕೊಹ್ಲಿ ಹೇಳಿದರು.

ಇದನ್ನೂ ಓದಿ: ಟಿ20 ವಿಶ್ವಕಪ್: 18 ಎಸೆತಗಳಲ್ಲೇ 50 ರನ್, ದಾಖಲೆ ನಿರ್ಮಿಸಿದ ಕೆಎಲ್ ರಾಹುಲ್!

ವಿಕೆಟ್ ಕಳೆದುಕೊಂಡರೆ 20 ಎಸೆತ ವೆಚ್ಚವಾಗುತ್ತದೆ
ಇದೇ ವೇಳೆ ವಿಕೆಟ್ ಕಳೆದುಕೊಳ್ಳಬಾರದು ಎಂದು ಮೊದಲೇ ಮಾತನಾಡಿದ್ದೆವು. ಕಾರಣ ಒಮ್ಮೆ ವಿಕೆಟ್ ಬಿದ್ದರೆ ಹೊಸ ಬ್ಯಾಟರ್ ಕ್ರೀಸ್ ಗೆ ಅಂಟಿಕೊಳ್ಳಲು 10 ರಿಂದ 20 ಎಸೆತಗಳು ವೆಚ್ಚವಾಗುತ್ತದೆ. ಹೀಗಾಗಿ ಆ ಬಗ್ಗೆ ನಾವು ಜಾಗರೂಕರಾಗಿದ್ದೆವು.  ಸಹಜವಾಗಿ ಆಡಿದರೆ ಬೇಗ ರನ್ ಬರುತ್ತವೆ ಎಂದುಕೊಂಡಿದ್ದೆವು. ನೀವು ನಮ್ಮ ಅಭ್ಯಾಸ ನಡೆಸುವಾಗಲೂ ನಾವು ಇದೇ ರೀತಿ ಅಭ್ಯಾಸ ಮಾಡುತ್ತಿದ್ದೆವು. ಇದು ನಮ್ಮ ಸಹಜ ಬ್ಯಾಟಿಂಗ್.. ಆದರೆ ಒಂದೆರಡು ಪಂದ್ಯದ ಕೆಟ್ಟ ಪ್ರದರ್ಶನ ಇಡೀ ತಂಡಕ್ಕೆ ಮುಳುವಾಯಿತು ಎಂದರು.

ಇದನ್ನೂ ಓದಿ: ಟಿ20 ವಿಶ್ವಕಪ್: ಪವರ್ ಪ್ಲೇ ನಲ್ಲಿ ಗರಿಷ್ಠ ರನ್, ಟಿ20 ಕ್ರಿಕೆಟ್, ಟಿ20 ವಿಶ್ವಕಪ್ ನಲ್ಲಿ ದಾಖಲೆ ಬರೆದ ಭಾರತ

ಒತ್ತಡ ನಿಭಾಯಿಸಿದ ಬೌಲರ್ ಗಳಿಗೆ ಮೆಚ್ಚುಗೆ
ಬೌಲರ್ ಗಳನ್ನು ಶ್ಲಾಘಿಸಿದ ಕೊಹ್ಲಿ ನಿಜಕ್ಕೂ ಬೌಲರ್ ಗಳ ಮೇಲೆ ಹೆಚ್ಚಿನ ಒತ್ತಡವಿತ್ತು. ಆದರೆ ಅದನ್ನು ಅವರು ನಿಭಾಯಿಸಿದ ರೀತಿ ಮೆಚ್ಚುವಂತದ್ದು. ಜಡೇಜಾ ಚೆನ್ನಾಗಿ ಬೌಲಿಂಗ್ ಮಾಡಿದರು, ಶಮಿ ಕೂಡ ಉತ್ತಮವಾಗಿದ್ದರು ಎಂದು ಕೊಹ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಟಿ20 ಕ್ರಿಕೆಟ್ ಇತಿಹಾಸದಲ್ಲೇ ಭಾರತಕ್ಕೆ ಅತೀ ದೊಡ್ಡ ಗೆಲುವು!

ಇಲ್ಲೇ ಜನ್ಮ ದಿನಾಚರಣೆ ಸಾಕು
ಇನ್ನು ಇಂದು ಕೊಹ್ಲಿ ಅವರ ಹುಟ್ಟಿದ ದಿನವಾಗಿದ್ದು, ಈ ಬಗ್ಗೆ ಮಾತನಾಡಿದ ಕೊಹ್ಲಿ  ನನ್ನ ಕುಟುಂಬ ಇಲ್ಲಿದೆ.. ನನಗೆ ಇಲ್ಲೇ (ಹುಟ್ಟುಹಬ್ಬ) ಆಚರಣೆ ಸಾಕು ಎಂದರು. 

ಇದನ್ನೂ ಓದಿ: ಟಿ20 ವಿಶ್ವಕಪ್: ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಜಯ, 'ಈ ಸಾಧನೆ ಮಾಡಿದ ವಿಶ್ವದ 3ನೇ ತಂಡ' ಭಾರತ, ಯಾವುದು ಆ ದಾಖಲೆ?


Stay up to date on all the latest ಕ್ರಿಕೆಟ್ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp