ಸಿಡ್ನಿ ಟೆಸ್ಟ್ ಹೀರೋ ಹನುಮ ವಿಹಾರಿ ಮರೆತ ಆಯ್ಕೆ ಸಮಿತಿ ವಿರುದ್ಧ ಅಭಿಮಾನಿಗಳ ಆಕ್ರೋಶ, ಸ್ಪಷ್ಟನೆ ಕೊಟ್ಟ ಬಿಸಿಸಿಐ ಹೇಳಿದ್ದೇನು?

ನ್ಯೂಜಿಲೆಂಡ್ ತಂಡದ ಭಾರತ ಪ್ರವಾಸದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ತಂಡ ಪ್ರಕಟಿಸಿದ್ದು, ತಂಡದಿಂದ ಸಿಡ್ನಿ ಟೆಸ್ಟ್ ಹೀರೋ ಹನುಮವಿಹಾರಿಯನ್ನು ಕೈ ಬಿಟ್ಟಿದ್ದಕ್ಕೆ ಅಭಿಮಾನಿಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಹನುಮ ವಿಹಾರಿ
ಹನುಮ ವಿಹಾರಿ

ನವದೆಹಲಿ: ನ್ಯೂಜಿಲೆಂಡ್ ತಂಡದ ಭಾರತ ಪ್ರವಾಸದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ತಂಡ ಪ್ರಕಟಿಸಿದ್ದು, ತಂಡದಿಂದ ಸಿಡ್ನಿ ಟೆಸ್ಟ್ ಹೀರೋ ಹನುಮವಿಹಾರಿಯನ್ನು ಕೈ ಬಿಟ್ಟಿದ್ದಕ್ಕೆ ಅಭಿಮಾನಿಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಹೌದು.. ಈ ಹಿಂದೆ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದ ಭಾರತಕ್ಕೆ ಐತಿಹಾಸಿಕ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ನಿರ್ಣಾಯಕ ಪಾತ್ರವಹಿಸಿದ್ದ ಹನುಮವಿಹಾರಿಯನ್ನು ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ ಮಾಡದೇ ಇರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಕ್ರಿಕೆಟ್ ಅಭಿಮಾನಿಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿಂದೆ ಕರುಣ್ ನಾಯರ್ ಗೆ ಆದ ಪರಿಸ್ಥಿತಿಯೇ ಹನುಮ ವಿಹಾರಿಗೂ ಮಾಡಲಾಗುತ್ತಿದೆ. ಅವರನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಟ್ವಿಟರ್ ನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com