ನವದೆಹಲಿ: ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿರುವ ಟಿ-20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗೆ 20 ಅಂಪೈರ್ಸ್ ಮತ್ತು ರೆಫ್ರಿಗಳ ಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದೆ. ಇದರಲ್ಲಿ 16 ಅಂಪೈರ್ ಗಳು ಹಾಗೂ ನಾಲ್ವರು ರೆಫ್ರಿಗಳ ಹೆಸರು ಇವೆ. ನಾಲ್ವರು ರೆಫರಿಗಳ ಪೈಕಿ ಕನ್ನಡಿಗ ಜಾವಗಲ್ ಶ್ರೀನಾಥ್ ಕೂಡಾ ಸ್ಥಾನ ಪಡೆದಿದ್ದಾರೆ.
16 ಅಂಪೈರ್ ಗಳಲ್ಲಿ ಭಾರತೀಯ ಅಂಪೈರ್ ನಿತಿನ್ ಮೆನನ್ ಅವರು ಸ್ಥಾನ ಪಡೆದಿದ್ದಾರೆ. ಈ ಮೂಲಕ 20 ಮಂದಿಯ ಪಟ್ಟಿಯಲ್ಲಿ ಇಬ್ಬರು ಭಾರತೀಯರಿಗೂ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಕಾರ್ಯನಿರ್ವಹಿಸುವ ಅವಕಾಶ ಲಭಿಸಿದೆ.
ಭಾರತದ ಅತ್ಯಂತ ಶ್ರೇಷ್ಠ ಬೌಲರ್ ಗಳಲ್ಲಿ ಒಬ್ಬರೆನಿಸಿರುವ ಶ್ರೀನಾಥ್ ಆಟಗಾರನಾಗಿ ನಿವೃತ್ತಿಯಾದ ನಂತರ ಮ್ಯಾಚ್ ರೆಫ್ರಿಯಾಗಿ ಸೆಕೆಂಡ್ ಇನ್ನಿಂಗ್ಸ್ ಆಡುತ್ತಿದ್ದಾರೆ. 2006ರಿಂದ ಅವರು ಐಸಿಸಿಯ ಮ್ಯಾಚ್ ರೆಫ್ರಿಯಾಗಿ ಕರ್ತವ್ಯ ನಿಭಾಯಿಸುತ್ತಿದ್ದಾರೆ.
Advertisement