ಶಾರ್ಜಾ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ ಎಲಿಮಿನೇಟರ್ ಪಂದ್ಯದಲ್ಲಿ ಕೋಲ್ಕತ್ತಾ ವಿರುದ್ಧ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಶಾರ್ಜಾದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಆರಂಭಿಸಿದ ಆರ್ ಸಿಬಿ ಗೆ ಮೊದಲ ಆಘಾತ ಎದುರಾಗಿದೆ. ಉತ್ತಮವಾಗಿ ಬ್ಯಾಟಿಂಗ್ ಮಾಡಿದ ದೇವದತ್ ಪಡಿಕ್ಕಲ್ 21 ರನ್ ಗಳಿಸಿ ಔಟಾಗಿದ್ದಾರೆ. ಇನ್ನು ತಂಡದ ನಾಯಕ ವಿರಾಟ್ ಕೊಹ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದು ಅಜೇಯ 23 ರನ್ ಬಾರಿಸಿದ್ದಾರೆ. ಕೊಹ್ಲಿ ಶ್ರೀಕರ್ ಭಾರತ್ ಸಾಥ್ ನೀಡಿದ್ದಾರೆ.
ಪ್ರಸ್ತುತ ಆರ್ ಸಿಬಿ ತಂಡ 6 ವಿಕೆಟ್ ಮುಕ್ತಾಯಕ್ಕೆ 1 ವಿಕೆಟ್ ನಷ್ಟಕ್ಕೆ 52 ರನ್ ಬಾರಿಸಿದೆ.
ಆರ್ ಸಿಬಿ ತಂಡ
ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ, ಶ್ರೀಕರ್ ಭಾರತ್, ಗ್ಲೆನ್ ಮ್ಯಾಕ್ಸ್ ವೆಲ್, ಎಬಿ ಡಿ ವಿಲಿಯರ್ಸ್, ಡಾನ್ ಕ್ರಿಶ್ಚಿಯನ್, ಶಹಬಾಜ್ ಅಹ್ಮದ್, ಜಾರ್ಜ್ ಗಾರ್ಟನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್.
ಕೋಲ್ಕತ್ತಾ ತಂಡ
ಶುಭಮನ್ ಗಿಲ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್, ಇಯೊನ್ ಮಾರ್ಗನ್, ಶಕೀಬ್ ಅಲ್ ಹಸನ್, ಸುನೀಲ್ ನರೈನ್, ಲಾಕಿ ಫರ್ಗುಸನ್, ಶಿವಂ ಮಾವಿ, ವರುಣ್ ಚಕ್ರವರ್ತಿ.
Advertisement