social_icon

ಯುಎಇ ಬ್ಯಾಟ್ಸ್‌ಮನ್ ಗುಲಾಂ ಶಬ್ಬೀರ್ ಗೆ ನಾಲ್ಕು ವರ್ಷ ನಿಷೇಧ

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಗುಲಾಂ ಶಬ್ಬೀರ್ ಭ್ರಷ್ಟಾಚಾರ ನಿಗ್ರಹ ಸಂಹಿತೆಯ ಆರು ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಾಲ್ಕು ವರ್ಷಗಳ ನಿಷೇಧ ವಿಧಿಸಿದೆ.

Published: 07th September 2021 12:06 PM  |   Last Updated: 07th September 2021 02:09 PM   |  A+A-


Ghulam-Shabbir

ಗುಲಾಂ ಶಬ್ಬೀರ್ ಗೆ ನಾಲ್ಕು ವರ್ಷ ನಿಷೇಧ

Posted By : srinivasamurthy
Source : PTI

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಗುಲಾಂ ಶಬ್ಬೀರ್ ಭ್ರಷ್ಟಾಚಾರ ನಿಗ್ರಹ ಸಂಹಿತೆಯ ಆರು ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಾಲ್ಕು ವರ್ಷಗಳ ನಿಷೇಧ ವಿಧಿಸಿದೆ.

ಈ ಸಮಯದಲ್ಲಿ ಅವರು ಯಾವುದೇ ರೀತಿಯ ಕ್ರಿಕೆಟ್ ನೊಂದಿಗೆ ಸಂಪರ್ಕದಲ್ಲಿರಲು ಸಾಧ್ಯವಾಗುವುದಿಲ್ಲ. ಶಬ್ಬೀರ್ ನಿಷೇಧವನ್ನು ಒಪ್ಪಿಕೊಂಡಿದ್ದಾರೆ ಮತ್ತು ಆಗಸ್ಟ್ 2025 ರ ಮಧ್ಯರಾತ್ರಿಯವರೆಗೆ ನಿಷೇಧಿಸಲಾಗುವುದು. 2019 ರ ಜನವರಿ-ಫೆಬ್ರವರಿಯಲ್ಲಿ ನೇಪಾಳ ವಿರುದ್ಧ ನಂತರ ಏಪ್ರಿಲ್‌ನಲ್ಲಿ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಭ್ರಷ್ಟಾಚಾರದ ಆರೋಪಗಳ ಕುರಿತು ಐಸಿಸಿಯ ಭ್ರಷ್ಟಾಚಾರ ನಿಗ್ರಹ ಘಟಕಕ್ಕೆ (ಎಸಿಯು) ವರದಿ ಮಾಡದ ಕಾರಣ ಶಬ್ಬೀರ್ ವಿರುದ್ಧ ಅಪರಾಧವನ್ನು ದಾಖಲಿಸಲಾಗಿತ್ತು. ಹೀಗಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ಭ್ರಷ್ಟಾಚಾರ ನಿಗ್ರಹ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದಲ್ಲಿ ಆತನನ್ನು ದೋಷಿ ಎಂದು ಪರಿಗಣಿಸಲಾಗಿದೆ. ಗುಲಾಂ ಶಬ್ಬೀರ್ ಆರು ಆರೋಪಗಳ ಮೇಲೆ ಶಿಕ್ಷೆಗೊಳಗಾಗಿದ್ದಾರೆ. ಜೊತೆಗೆ ಈ ಕ್ರಿಕೆಟಿಗ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಐಸಿಸಿಯು ನೀಡಿದ ಹೇಳಿಕೆಯಲ್ಲಿ, ಶಬ್ಬೀರ್ ಸೆಕ್ಷನ್ 2.4.4 ನಿಯಮವನ್ನು ಅನುಸರಿಸಲಿಲ್ಲ ಮತ್ತು ಭ್ರಷ್ಟಾಚಾರ ವಿರೋಧಿ ಘಟಕಕ್ಕೆ 2019 ರ ಜನವರಿ-ಫೆಬ್ರವರಿ ಅವಧಿಯಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಸ್ತಾಪದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿಲ್ಲ ಎಂದು ಹೇಳಲಾಗಿದೆ. ಇದರ ಹೊರತಾಗಿ, ಏಪ್ರಿಲ್ 2019 ರಲ್ಲಿ ಜಿಂಬಾಬ್ವೆ ವಿರುದ್ಧದ ಸರಣಿಯ ಸಮಯದಲ್ಲಿ, ಅವರು ಫಿಕ್ಸಿಂಗ್‌ನಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಗಳಿವೆ. ಆದರೆ ಅವರು ಈ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ. ಜೊತೆಗೆ ಸಂಬಂಧಿಸಿದ ಮಾಹಿತಿಯನ್ನು ಮರೆಮಾಚುವ ಮೂಲಕ ತನಿಖೆಗೆ ಅಡ್ಡಿಪಡಿಸಿದ್ದಕ್ಕಾಗಿ ತಪ್ಪಿತಸ್ಥನೆಂದು ಕಂಡುಬಂದಿದೆ. ಗುಲಾಂ ಶಬ್ಬೀರ್ ಮೇಲಿನ ನಿಷೇಧ 20 ಆಗಸ್ಟ್ 2025 ಕ್ಕೆ ಕೊನೆಗೊಳ್ಳುತ್ತದೆ.

ಗುಲಾಂ ಶಬ್ಬೀರ್ ಯುಎಇ ಪರ 23 ಏಕದಿನ ಪಂದ್ಯಗಳಲ್ಲಿ 21.73 ರ ಸರಾಸರಿಯಲ್ಲಿ 500 ರನ್ ಗಳಿಸಿದರು ಮತ್ತು 30 ಕ್ಯಾಚ್ ಮತ್ತು ಎರಡು ಸ್ಟಂಪಿಂಗ್ ಮಾಡಿದ್ದಾರೆ. ಜೊತೆಗೆ 17 ಟಿ 20 ಪಂದ್ಯಗಳಲ್ಲಿ 18.90 ಸರಾಸರಿಯಲ್ಲಿ 208 ರನ್ ಗಳಿಸಿದ್ದಾರೆ. ಇಲ್ಲಿ 14 ಕ್ಯಾಚ್‌ಗಳು ಮತ್ತು ಒಂದು ಸ್ಟಂಪಿಂಗ್ ಅವರ ಹೆಸರಿನಲ್ಲಿದೆ.
 


Stay up to date on all the latest ಕ್ರಿಕೆಟ್ news
Poll
Railways Minister Ashwini Vaishnaw waves at a goods train as train services resume

ಒಡಿಶಾದಲ್ಲಿ ಭೀಕರ ರೈಲು ಅಪಘಾತದ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವರು ರಾಜೀನಾಮೆ ನೀಡಬೇಕೇ?


Result
ಹೌದು
ಬೇಡ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp