ಐಪಿಎಲ್ 2021: ಅಯ್ಯರ್, ತ್ರಿಪಾಠಿ ಭರ್ಜರಿ ಪ್ರದರ್ಶನ; ಹಾಲಿ ಚಾಂಪಿಯನ್ ಮುಂಬೈ ವಿರುದ್ಧ ಕೆಕೆಆರ್ ಗೆ 7 ವಿಕೆಟ್ ಭರ್ಜರಿ ಜಯ

ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ವಿರುದ್ಧ ಕೆಕೆಆರ್ ಗೆ 7 ವಿಕೆಟ್ ಭರ್ಜರಿ ಜಯ ಸಾಧಿಸಿದೆ.
ಗೆಲುವಿನ ಅಲೆಯಲ್ಲಿ ಕೆಕೆಆರ್
ಗೆಲುವಿನ ಅಲೆಯಲ್ಲಿ ಕೆಕೆಆರ್

ದುಬೈ: ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ವಿರುದ್ಧ ಕೆಕೆಆರ್ ಗೆ 7 ವಿಕೆಟ್ ಭರ್ಜರಿ ಜಯ ಸಾಧಿಸಿದೆ.

ಕೋಲ್ಕತಾ ನೈಟ್ ರೈಡರ್ಸ್ ತಂಡ ವೆಂಕಟೇಶ್ ಅಯ್ಯರ್ ಮತ್ತು ರಾಹುಲ್ ತ್ರಿಪಾಠಿ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡ ನೀಡಿದ 156 ರನ್ ಗಳ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಕೋಲ್ಕತಾ ನೈಟ್ ರೈಡರ್ಸ್ ತಂಡ ವೆಂಕಟೇಶ್ ಅಯ್ಯರ್ (53 ರನ್) ಮತ್ತು ರಾಹುಲ್ ತ್ರಿಪಾಠಿ (74ರನ್) ಅಮೋಘ ಬ್ಯಾಟಿಂಗ್ ನೆರವಿನಿಂದಾಗಿ ಇನ್ನೂ 29 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. 

 ಈ ಅದ್ಭುತ ಗೆಲುವಿನಿಂದಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಅಂಕಪಟ್ಟಿಯಲ್ಲಿ ಭಾರೀ ಏರಿಕೆ ಕಂಡಿದ್ದು 6ನೇ ಸ್ಥಾನದಿಂದ ಟಾಪ್ 4ಗೆ ಲಗ್ಗೆಯಿಟ್ಟಿದೆ. ಕೆಕೆಆರ್ ತಂಡದ ಈ ಗೆಲುವಿನಿಂದ ಅಂಕಪಟ್ಟಿಯಲ್ಲಿನ ರೋಚಕತೆ ಮತ್ತಷ್ಟು ಹೆಚ್ಚಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com