ಕ್ರಿಕೆಟರ್ ರಾಜೇಶ್ವರಿ ಗಾಯಕ್ವಾಡ್‌ಗೆ 15 ಲಕ್ಷ ರೂ. ಬಹುಮಾನ ಘೋಷಿಸಿದ ರಾಜ್ಯ ಸರ್ಕಾರ

ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಮಹಿಳೆಯರ ಕ್ರಿಕೆಟ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಭಾರತ ತಂಡವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಸೋಮವಾರ ಅಭಿನಂದಿಸಿದ್ದಾರೆ. 
ರಾಜೇಶ್ವರಿ ಗಾಯಕ್ವಾಡ್‌
ರಾಜೇಶ್ವರಿ ಗಾಯಕ್ವಾಡ್‌
Updated on

ಬೆಂಗಳೂರು: ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಮಹಿಳೆಯರ ಕ್ರಿಕೆಟ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಭಾರತ ತಂಡವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಸೋಮವಾರ ಅಭಿನಂದಿಸಿದ್ದಾರೆ. 

ಮಹಿಳಾ ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದ ಕರ್ನಾಟಕದ ರಾಜೇಶ್ವರಿ ಗಾಯಕ್ವಾಡ್ ಅವರಿಗೆ ರಾಜ್ಯ ಸರ್ಕಾರದಿಂದ 15 ಲಕ್ಷ ನಗದು ಬಹುಮಾನ ನೀಡುವುದಾಗಿ ಸಚಿವ ಡಾ.ನಾರಾಯಣಗೌಡ ಅವರು ಘೋಷಿಸಿದ್ದಾರೆ.

ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಅದ್ಭುತ ಹೋರಾಟವನ್ನು ಪ್ರದರ್ಶಿಸಿದರೂ ಸಣ್ಣ ಅಂತರದಿಂದ ಟೀಂ ಇಂಡಿಯಾಕ್ಕೆ ಬಂಗಾರದ ಪದಕ ಕೈತಪ್ಪಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com