ನ್ಯೂಜಿಲೆಂಡ್- ಭಾರತ ಮೊದಲ ಟಿ-20 ಪಂದ್ಯ ಆರಂಭಕ್ಕೆ ಮಳೆ ಅಡ್ಡಿ

ಭಾರತ - ನ್ಯೂಜಿಲೆಂಡ್ ನಡುವಿನ ಮೊದಲ ಟಿ-20 ಪಂದ್ಯ ಆರಂಭಕ್ಕೆ ಮಳೆ ಅಡ್ಡಿಯಾಗಿದೆ. ಟಿ-20 ವಿಶ್ವಕಪ್ ಸೆಮಿ ಫೈನಲ್ ನಲ್ಲಿ ಸೋತ ಬಳಿಕ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ-20 ಸರಣಿ ನಡೆಯುತ್ತಿದ್ದು, ಇಲ್ಲಿನ ಸ್ಕೈ ಕ್ರೀಡಾಂಗಣಕ್ಕೆ ಅಪಾರ ಸಂಖ್ಯೆಯಲ್ಲಿ ಭಾರತದ ಕ್ರಿಕೆಟ್ ಅಭಿಮಾನಿಗಳು ಆಗಮಿಸಿದ್ದಾರೆ.
ಭಾರತದ ಕ್ರಿಕೆಟ್ ಅಭಿಮಾನಿಗಳು
ಭಾರತದ ಕ್ರಿಕೆಟ್ ಅಭಿಮಾನಿಗಳು
Updated on

ವೆಲ್ಲಿಂಗ್ ಟನ್: ಭಾರತ - ನ್ಯೂಜಿಲೆಂಡ್ ನಡುವಿನ ಮೊದಲ ಟಿ-20 ಪಂದ್ಯ ಆರಂಭಕ್ಕೆ ಮಳೆ ಅಡ್ಡಿಯಾಗಿದೆ. ಟಿ-20 ವಿಶ್ವಕಪ್ ಸೆಮಿ ಫೈನಲ್ ನಲ್ಲಿ ಸೋತ ಬಳಿಕ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ-20 ಸರಣಿ ನಡೆಯುತ್ತಿದ್ದು, ಇಲ್ಲಿನ ಸ್ಕೈ ಕ್ರೀಡಾಂಗಣಕ್ಕೆ ಅಪಾರ ಸಂಖ್ಯೆಯಲ್ಲಿ ಭಾರತದ ಕ್ರಿಕೆಟ್ ಅಭಿಮಾನಿಗಳು ಆಗಮಿಸಿದ್ದಾರೆ.

ಆದರೆ, ಮಳೆಯಿಂದ ಮೈದಾನ ಒದ್ದೆಯಾಗಿರುವುದರಿಂದ ಟಾಸ್ ವಿಳಂಬವಾಗಿದೆ. ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ ಈ ಪಂದ್ಯದ ನಾಯಕತ್ವ ವಹಿಸಿದ್ದಾರೆ. ಇಂದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಅವರಿಗೂ ವಿಶ್ರಾಂತಿ ನೀಡಲಾಗಿದೆ.

ನ್ಯೂಜಿಲೆಂಡ್ ನಲ್ಲಿ ಟೀಂ ಇಂಡಿಯಾ ಭಯಬಿಟ್ಟು ಆಟವಾಡಬೇಕಿದೆ ಎಂದು ಕೋಚ್ ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ. ಟಿ-20 ಮಾದರಿಯಲ್ಲಿ ಭಯ ಬಿಟ್ಟು ಸ್ವತಂತ್ರವಾಗಿ ಆಡಬೇಕಾದ ಅಗತ್ಯವಿದೆ. ಇದೇ ವೇಳೆ ತಂಡದ ಪರಿಸ್ಥಿತಿಗೆ ಅನುಗುಣವಾಗಿ ಹೊಂದಿಕೊಳ್ಳುವುದು ಪ್ರಮುಖವಾಗಿದೆ ಎಂದು ಮುಖ್ಯ ಕೋಚ್ ವಿವಿಎಸ್ ಲಕ್ಷ್ಮಣ್ ಸಲಹೆ ನೀಡಿದ್ದಾರೆ. ಟಿ-20 ವಿಶ್ವಕಪ್ ನಂತರ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ವಿಶ್ರಾಂತಿಯಲ್ಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com