ಐಪಿಎಲ್ ನಿಯಮ ಉಲ್ಲಂಘನೆ: ಆರ್ ಸಿಬಿಯ ದಿನೇಶ್ ಕಾರ್ತಿಕ್ ಗೆ ವಾಗ್ದಂಡನೆ!

ಕೊಲ್ಕತ್ತಾದಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಎಲಿಮಿನೆಂಟ್ ಪಂದ್ಯದಲ್ಲಿ ಐಪಿಎಲ್ ನಿಯಮ ಉಲ್ಲಂಘಟನೆಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟ್ಸ್ ಮನ್ ದಿನೇಶ್ ಕಾರ್ತಿಕ್ ವಾಗ್ದಂಡನೆಗೆ ಗುರಿಯಾಗಿದ್ದಾರೆ. 
ದಿನೇಶ್ ಕಾರ್ತಿಕ್
ದಿನೇಶ್ ಕಾರ್ತಿಕ್
Updated on

ಅಹಮದಾಬಾದ್: ಕೊಲ್ಕತ್ತಾದಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಎಲಿಮಿನೆಂಟ್ ಪಂದ್ಯದಲ್ಲಿ ಐಪಿಎಲ್ ನಿಯಮ ಉಲ್ಲಂಘಟನೆಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟ್ಸ್ ಮನ್ ದಿನೇಶ್ ಕಾರ್ತಿಕ್ ವಾಗ್ದಂಡನೆಗೆ ಗುರಿಯಾಗಿದ್ದಾರೆ. 

ಆದಾಗ್ಯೂ, ನಿರ್ದಿಷ್ಟ ಅಪರಾಧದ ಸ್ವರೂಪದ ಬಗ್ಗೆ ಬಿಸಿಸಿಐ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಏನನ್ನೂ ತಿಳಿಸಿಲ್ಲ. ಐಪಿಎಲ್ ನಿಯಮದ ಅರ್ಟಿಕಲ್ 2.3 ರ ಹಂತ 1ನ್ನು ಉಲ್ಲಂಘಿಸಿದ್ದು, ಕಾರ್ತಿಕ್ ಕೂಡಾ ಈ ಶಿಕ್ಷೆಯನ್ನು ಒಪ್ಪಿಕೊಂಡಿದ್ದಾರೆ. ಹಂತ 1 ಉಲ್ಲಂಘನೆಗಾಗಿ ಪಂದ್ಯದ ರೆಫ್ರಿ ನಿರ್ಧಾರವೇ ಅಂತಿಮವಾಗಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. 

ಬುಧವಾರ ನಡೆದ ಐಪಿಎಲ್ ಎಲಿಮಿನೆಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 14 ರನ್ ಗಳಿಂದ ಆರ್ ಸಿಬಿ ಸೋಲಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com