social_icon

ಬಹು ದೊಡ್ಡ ನಿರ್ಧಾರಕ್ಕೆ ಮುಂದಾದ ಬಿಸಿಸಿಐ: ಭಾರತ ತಂಡ ಸೇರುತ್ತಾರಾ ಮಹೇಂದ್ರ ಸಿಂಗ್ ಧೋನಿ?

ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಟೀಂ ಇಂಡಿಯಾ ಸೋಲಿನ ನಂತರ ಭಾರತೀಯ ಕ್ರಿಕೆಟ್‌ನಲ್ಲಿ ಸಂಚಲನ ಉಂಟಾಗಿದೆ.

Published: 15th November 2022 08:41 PM  |   Last Updated: 15th November 2022 08:41 PM   |  A+A-


Rohit Sharma-MS Dhoni

ರೋಹಿತ್ ಶರ್ಮಾ-ಎಂಎಸ್ ಧೋನಿ

Posted By : Vishwanath S
Source : Online Desk

ನವದೆಹಲಿ: ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಟೀಂ ಇಂಡಿಯಾ ಸೋಲಿನ ನಂತರ ಭಾರತೀಯ ಕ್ರಿಕೆಟ್‌ನಲ್ಲಿ ಸಂಚಲನ ಉಂಟಾಗಿದೆ. 

ಈ ಸೋಲಿನಿಂದಾಗಿ ಬಿಸಿಸಿಐ ಎರಡು ವಿಭಿನ್ನ ನಾಯಕರನ್ನು ಮತ್ತು ವೈಟ್ ಬಾಲ್ ಸ್ವರೂಪಗಳಲ್ಲಿ ವಿಭಿನ್ನ ಸಿಬ್ಬಂದಿಯನ್ನು ನೇಮಿಸಲು ಹೊರಟಿದೆ ಎಂದು ವರದಿಯಾಗುತ್ತಿವೆ. ಈ ಅನುಕ್ರಮದಲ್ಲಿ ಬಿಸಿಸಿಐ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಟಿ20 ಮಾದರಿಯಲ್ಲಿ ದೊಡ್ಡ ಜವಾಬ್ದಾರಿಯನ್ನು ವಹಿಸಲಿದೆ ಎಂಬ ವರದಿಯಾಗುತ್ತಿವೆ.

ಟಿ20 ತಂಡದ ಮುಖ್ಯ ಕೋಚ್ ಎಂಎಸ್ ಧೋನಿ?
ದಿ ಟೆಲಿಗ್ರಾಫ್‌ನ ವರದಿಯ ಪ್ರಕಾರ, ಕಳೆದ ಹಲವಾರು ವರ್ಷಗಳಿಂದ ಬಹಳಷ್ಟು ಏಕದಿನ ಮತ್ತು ಟಿ20 ಸರಣಿಗಳನ್ನು ಆಡಲಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಕೆಲಸದ ಹೊರೆ ತಗ್ಗಿಸಲು BCCI ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಗೆ T20 ಸ್ವರೂಪದ ಮುಖ್ಯ ಕೋಚ್ ಅಥವಾ ನಿರ್ದೇಶಕ ಹುದ್ದೆಯನ್ನು ಹಸ್ತಾಂತರಿಸಲು ಪರಿಗಣಿಸುತ್ತಿದೆ. ಕಳೆದ ವರ್ಷವೂ ಟಿ20 ವಿಶ್ವಕಪ್ ವೇಳೆ ಭಾರತ ತಂಡದೊಂದಿಗೆ ಮೆಂಟರ್ ಆಗಿ ಒಡನಾಟ ಹೊಂದಿದ್ದ ಧೋನಿ ಈ ಬಾರಿ ಕೇವಲ ಒಂದು ಪಂದ್ಯಾವಳಿಗೆ ಮಾತ್ರವಲ್ಲದೆ ಸುದೀರ್ಘ ಅವಧಿಗೆ ದೊಡ್ಡ ಜವಾಬ್ದಾರಿಯನ್ನು ನಿಭಾಯಿಸಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: 2024ರ ಟಿ20 ವಿಶ್ವಕಪ್‌ಗೆ ಹಾರ್ದಿಕ್ ನನ್ನು ನಾಯಕನನ್ನಾಗಿ ಮಾಡಿ, ಹೊಸ ತಂಡ ಕಟ್ಟಲು ಪ್ರಾರಂಭಿಸಿ: ಶ್ರೀಕಾಂತ್

ವರದಿಗಳ ಪ್ರಕಾರ, ಈ ವರ್ಷ ಭಾರತದಲ್ಲಿ ನಡೆಯಲಿರುವ ಐಪಿಎಲ್ ಸೀಸನ್ 16ರ ನಂತರ ಮಹೇಂದ್ರ ಸಿಂಗ್ ಧೋನಿ ಐಪಿಎಲ್‌ನಿಂದ ನಿವೃತ್ತಿ ಘೋಷಿಸಲಿದ್ದಾರೆ. ಆ ನಂತರ ಧೋನಿ ಜೊತೆ ಬಿಸಿಸಿಐ ಮಾತುಕತೆ ನಡೆಸಿದ ನಂತರ ಈ ದೊಡ್ಡ ನಿರ್ಧಾರವನ್ನು ಘೋಷಿಸಲಿದೆ. ಹೀಗಾಗಿ ಮೂರು ಐಸಿಸಿ ಟೂರ್ನಿಗಳಲ್ಲಿ ಭಾರತ ತಂಡವನ್ನು ವಿಜೇತರನ್ನಾಗಿಸಿರುವ ನಾಯಕ ಧೋನಿ ಭಾರತ ತಂಡಕ್ಕೆ ಮಾರ್ಗದರ್ಶನ ನೀಡಬಲ್ಲರು.


Stay up to date on all the latest ಕ್ರಿಕೆಟ್ news
Poll
New parliament building

ಹೊಸ ಸಂಸತ್ ಕಟ್ಟಡದ ಉದ್ಘಾಟನೆಯನ್ನು ಬಹಿಷ್ಕರಿಸುವ ಹಲವಾರು ವಿರೋಧ ಪಕ್ಷಗಳ ನಿರ್ಧಾರವು ಸಮರ್ಥನೀಯವೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp