social_icon

3ನೇ ಟಿ20: ಭಾರತದ ವಿರುದ್ಧ ದ.ಆಫ್ರಿಕಾಗೆ 49 ರನ್ ಗಳ ಭರ್ಜರಿ ಜಯ, ಟಿ20 ಸರಣಿ ಟೀಂ ಇಂಡಿಯಾ ತೆಕ್ಕೆಗೆ

ಭಾರತದ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ 49ರನ್ ಗಳ ಗೆಲುವು ಸಾಧಿಸಿದೆ. ಆ ಮೂಲಕ 2-1 ಅಂತರದಲ್ಲಿ ಟೀಂ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿಯನ್ನು ಜಯಿಸಿದೆ.

Published: 04th October 2022 10:47 PM  |   Last Updated: 04th October 2022 10:57 PM   |  A+A-


South Africa won by 49 runs against India

ಆಫ್ರಿಕಾಗೆ ಜಯ

Posted By : srinivasamurthy
Source : Online Desk

ಇಂದೋರ್: ಭಾರತದ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ 49ರನ್ ಗಳ ಗೆಲುವು ಸಾಧಿಸಿದೆ. ಆ ಮೂಲಕ 2-1 ಅಂತರದಲ್ಲಿ ಟೀಂ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿಯನ್ನು ಜಯಿಸಿದೆ.

ದಕ್ಷಿಣ ಆಫ್ರಿಕಾ ಬ್ಯಾಟ್ಸ್‌ಮನ್ ರಿಲೋ ರೋಸೋ ಶತಕ ಹಾಗೂ ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್ ರ ಅಬ್ಬರಕ್ಕೆ ಟೀಂ ಇಂಡಿಯಾ ಲೆಕ್ಕಾಚಾರ ಉಲ್ಟಾ ಆಗಿದ್ದು, ಆಫ್ರಿಕಾ ನೀಡಿದ 228ರನ್ ಬೃಹತ್ ಮೊತ್ತ ಚೇಸ್ ಮಾಡಲು ಟೀಂ ಇಂಡಿಯಾ ಹರಸಾಹಸ ಪಟ್ಟಿತು. ದಿನೇಶ್ ಕಾರ್ತಿಕ್, ದೀಪಕ್ ಚಹಾರ್ ಹೋರಾಟ ನಡೆಸಿದರೂ ಸಾಧ್ಯವಾಗಲಿಲ್ಲ.

ಇದನ್ನೂ ಓದಿ: 3ನೇ ಟಿ20: ಮತ್ತೆ ರಬಾಡಾಗೆ ರೋಹಿತ್ ಶರ್ಮಾ ವಿಕೆಟ್, ಜಂಟಿ ದಾಖಲೆ

ಕೊನೆಗೆ ಟೀಂ ಇಂಡಿಯಾ 18.3 ಓವರ್‌ಗಳಲ್ಲಿ 178 ರನ್ ಸಿಡಿಸಿ ಆಲೌಟ್ ಆಯಿತು. ಇದರೊಂದಿಗೆ ಸೌತ್ ಆಫ್ರಿಕಾ 49 ರನ್ ಗೆಲುವು ದಾಖಲಿಸಿತು. ಅಂತಿಮ ಟಿ20 ಪಂದ್ಯ ಗೆದ್ದು ಟಿ20 ಸರಣಿ ಕ್ಲೀನ್ ಸ್ಪೀಪ್ ಗುರಿ ಹೊಂದಿದ್ದ ಟೀಂ ಇಂಡಿಯಾ ಇದೀಗ 2-1 ಅಂತರದಲ್ಲಿ ಸರಣಿ ಗೆದ್ದುಕೊಂಡಿದೆ.  

ಆಫ್ರಿಕಾ ನೀಡಿದ ಬೃಹತ್ ಮೊತ್ತ ಬೆನ್ನು ಹತ್ತಿದ ಭಾರತ ತಂಡ ರೋಹಿತ್ ಶರ್ಮಾ ವಿಕೆಟ್ ಪತನದ ಮೂಲಕ ಆರಂಭಿಕ ಆಘಾತ ಎದುರಿಸಿತು. ಬಳಿಕ ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಭಾರತ ತಂಡಕ್ಕೆ ದಿನೇಶ್ ಕಾರ್ತಿಕ್ ಮತ್ತು ದೀಪಕ್ ಚಹರ್ ಆಸರೆಯಾದರೂ ಆವರ ಆಟ ಕೂಡ ಹೆಚ್ಚು ಹೊತ್ತ ಸಾಗಲಿಲ್ಲ.

ಇದನ್ನೂ ಓದಿ: 3ನೇ ಟಿ20: ದ.ಆಫ್ರಿಕಾ ಭರ್ಜರಿ ಬ್ಯಾಟಿಂಗ್, 2 ದಾಖಲೆ ನಿರ್ಮಾಣ

ದಿನೇಶ್ ಕಾರ್ತಿಕ್ 46 ರನ್ ಗಳಿಸಿ ಔಟಾದರೆ, ಚಹರ್ 31 ರನ್ ಗಳಿಸಿ ನಿರ್ಗಮಿಸಿದರು. ಕಳೆದ ಪಂದ್ಯದ ಹೀರೋ ಸೂರ್ಯ ಕುಮಾರ್ ಯಾದವ್ ಮತ್ತು ವಿರಾಟ್ ಕೊಹ್ಲಿ ಕೂಡ ಬೇಗನೆ ವಿಕೆಟ್ ಒಪ್ಪಿಸಿದ್ದು ಭಾರತಕ್ಕೆ ಮುಳುವಾಯಿತು. ಅಂತಿಮವಾಗಿ ಭಾರತ ತಂಡ 18.3 ಓವರ್ ನಲ್ಲಿ  178 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಒಪ್ಪಿಸಿ 49ರನ್ ಗಳ ಅಂತರದಲ್ಲಿ ಸೋಲೊಪ್ಪಿಕೊಂಡಿತು.


Stay up to date on all the latest ಕ್ರಿಕೆಟ್ news

ಇತ್ತೀಚಿನ ಸುದ್ದಿ

ನೈಸರ್ಗಿಕ ಹರಿವನ್ನು ನಿಯಂತ್ರಿಸಲಾಗದು, ತಮಿಳುನಾಡಿಗೆ ನಿತ್ಯ 6,500 ಕ್ಯೂಸೆಕ್ ನೀರು ಹರಿಯುತ್ತಿದೆ: ಡಿಕೆ.ಶಿವಕುಮಾರ್

ರಾಜ್ಯದಲ್ಲಿ ಹಿಂದೂಗಳು ಬದುಕುವ ಹಾಗಿಲ್ಲವೇ, ಶಿವಮೊಗ್ಗದ ಮುಗ್ಧ ನಾಗರಿಕರ ಪ್ರಶ್ನೆಗಳಿಗೆ ‘ಜಾತ್ಯಾತೀತ’ ಸಿದ್ದರಾಮಯ್ಯ ಉತ್ತರಿಸುವಿರಾ?: ಬಿಜೆಪಿ ಪ್ರಶ್ನೆ

ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ, ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯಾಗಲಿದೆ: ಬಿಎಸ್.ಯಡಿಯೂರಪ್ಪ

ಗಾಂಧಿ ಜಯಂತಿ: ರಾಜ್‌ಘಾಟ್‌ನಲ್ಲಿ ರಾಷ್ಟ್ರಪಿತನಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ, ದ್ರೌಪದಿ ಮುರ್ಮು

ಈದ್​ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ, ಶಿವಮೊಗ್ಗದ ರಾಗಿಗುಡ್ಡದಲ್ಲಿ ಪರಿಸ್ಥಿತಿ ಉದ್ವಿಗ್ನ, 7 ಮಂದಿಗೆ ಗಾಯ: 10ಕ್ಕೂ ಹೆಚ್ಚು ಮಂದಿ ಪೊಲೀಸರ ವಶ

Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp