ಏಷ್ಯಾಕಪ್‌ 2022: ಗಾಯದ ಸಮಸ್ಯೆಯಿಂದ 'ಜಡೇಜಾ' ಟೂರ್ನಿಯಿಂದಲೇ ಔಟ್, ರಿಪ್ಲೇಸ್ ಯಾರು ಗೊತ್ತಾ?

ಏಷ್ಯಾಕಪ್ 2022 ಟೂರ್ನಿ ನಿರ್ಣಾಯಕ ಹಂತ ತಲುಪಿರುವಂತೆಯೇ ಇತ್ತ ಟೀಂ ಇಂಡಿಯಾಗೆ ಆಘಾತ ಎದುರಾಗಿದ್ದು, ತಂಡದ ಪ್ರಮುಖ ಆಲ್ರೌಂಡರ್ ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.
ರವೀಂದ್ರ ಜಡೇಜಾ
ರವೀಂದ್ರ ಜಡೇಜಾ
Updated on

ನವದೆಹಲಿ: ಏಷ್ಯಾಕಪ್ 2022 ಟೂರ್ನಿ ನಿರ್ಣಾಯಕ ಹಂತ ತಲುಪಿರುವಂತೆಯೇ ಇತ್ತ ಟೀಂ ಇಂಡಿಯಾಗೆ ಆಘಾತ ಎದುರಾಗಿದ್ದು, ತಂಡದ ಪ್ರಮುಖ ಆಲ್ರೌಂಡರ್ ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಮೊಣಕಾಲಿನ ಗಾಯದ ಸಮಸ್ಯೆಗೆ ತುತ್ತಾಗಿದ್ದ ರವೀಂದ್ರ ಜಡೇಜಾರ ವೈದ್ಯಕೀಯ ಪರೀಕ್ಷೆಗಳ ಬಳಿಕ ವೈದ್ಯರು ಕಡ್ಡಾಯ ವಿಶ್ರಾಂತಿಗೆ ಸೂಚಿಸಿದ್ದಾರೆ. ಹೀಗಾಗಿ ಜಡೇಜಾರನ್ನು ಹಾಲಿ ಏಷ್ಯಾಕಪ್ ಟೂರ್ನಿಯಿಂದಲೇ ಕೈ ಬಿಡಲಾಗಿದೆ. ಜಡೇಜಾ ಪ್ರಸ್ತುತ ಬಿಸಿಸಿಐ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ಬಿಸಿಸಿಐ ಮಾಹಿತಿ ನೀಡಿದೆ.

ಅಂತೆಯೇ ಅಖಿಲ ಭಾರತ ಹಿರಿಯರ ಆಯ್ಕೆ ಸಮಿತಿಯು ಪ್ರಸ್ತುತ ನಡೆಯುತ್ತಿರುವ ಏಷ್ಯಾಕಪ್‌ನಲ್ಲಿ ರವೀಂದ್ರ ಜಡೇಜಾ ಅವರ ಬದಲಿ ಆಟಗಾರನಾಗಿ ಅಕ್ಷರ್ ಪಟೇಲ್ ಅವರನ್ನು ಹೆಸರಿಸಿದೆ.

ಇನ್ನು ಹಾಲಿ ಏಷ್ಯಾಕಪ್ ಟೂರ್ನಿಯಲ್ಲಿ ಭರ್ಜರಿ ಫಾರ್ಮ್ ನಲ್ಲಿದ್ದ ಜಡೇಜಾ ಪಾಕಿಸ್ತಾನದ ವಿರುದ್ಧ 35 ರನ್ ಮತ್ತು ಹಾಂಗ್ ಕಾಂಗ್ ವಿರುದ್ಧದ 2ನೇ ಪಂದ್ಯದಲ್ಲಿ ಬೌಲಿಂಗ್ ನಲ್ಲಿ 1 ವಿಕೆಟ್ ಪಡೆದು ಉತ್ತಮ ಪ್ರದರ್ಶನ ತೋರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com